Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:9 - ಕನ್ನಡ ಸತ್ಯವೇದವು J.V. (BSI)

9 ತರುವಾಯ ಅವರು ಹೋಗಿ ಪರ್ವತಪ್ರದೇಶ, ದಕ್ಷಿಣ ಸೀಮೆ, ಇಳಕಲಿನ ಪ್ರದೇಶ ಇವುಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಅವರು ಪರ್ವತಪ್ರದೇಶ, ದಕ್ಷಿಣಸೀಮೆ ಮತ್ತು ತಗ್ಗುಪ್ರದೇಶ ಇವುಗಳಿಗೆ ಹೋಗಿ ಅಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತರುವಾಯ ಯೆಹೂದ್ಯರು ಉಳಿದಿರುವ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಆ ಕಾನಾನ್ಯರು ಬೆಟ್ಟಪ್ರದೇಶ, ನೆಗೆವ್ ಮತ್ತು ಪಶ್ಚಿಮದ ಇಳಕಲಿನ ಪ್ರದೇಶದಲ್ಲಿ ವಾಸ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತರುವಾಯ ಯೆಹೂದ ಗೋತ್ರದವರು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:9
7 ತಿಳಿವುಗಳ ಹೋಲಿಕೆ  

ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಮತ್ತು ಇಸ್ರಾಯೇಲ್ ಪ್ರಾಂತಗಳ ಬೆಟ್ಟಗಳಲ್ಲಿಯೂ ಇದ್ದ ಉನ್ನತಪುರುಷರನ್ನು ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.


ಅನಂತರ ಯೆಹೋಶುವನೂ ಇಸ್ರಾಯೇಲ್ಯರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್‍ದೇಶದ ದಕ್ಷಿಣಸೀಮೆಗೆ ಮುಂದೆ ಮುಂದೆ ಹೋಗುತ್ತಾ ಇದ್ದನು.


ಯೆಹೂದ್ಯರು ಯೆರೂಸಲೇವಿುನವರೊಡನೆ ಯುದ್ಧಮಾಡಿ ಅದನ್ನು ಹಿಡಿದು ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಹೊತ್ತಿಸಿದರು.


ಅವರು ಮುಂಚೆ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಹೊಡೆದು ಬಿಟ್ಟರು.


ಇಳಕಲಿನ ಪ್ರದೇಶ, ತಗ್ಗಾದ ಪ್ರದೇಶ, ಬೆಟ್ಟಗಳ ಬುಡದಲ್ಲಿರುವ ಸೀಮೆ, ಅರಣ್ಯ, ದಕ್ಷಿಣಪ್ರಾಂತ್ಯ ಇವುಗಳಲ್ಲಿ ಆಳುತ್ತಿದ್ದ ಹಿತ್ತಿಯ ಅಮೋರಿಯ ಕಾನಾನ್ ಪೆರಿಜ್ಜೀಯ ಹಿವ್ವಿಯ ಯೆಬೂಸಿಯ ಅರಸರನ್ನು ಸೋಲಿಸಿ ಅವರ ದೇಶಗಳನ್ನು ಇಸ್ರಾಯೇಲ್ ಕುಲಭಾಗಗಳಿಗೆ ಸ್ವಾಸ್ತ್ಯವಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು