Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:13 - ಕನ್ನಡ ಸತ್ಯವೇದವು J.V. (BSI)

13 ನೀವು ತಿರಿಗಿ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ; ಆದದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೂ ನೀವು ಮತ್ತೆ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸುತ್ತಾ ಬಂದಿರಿ; ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನೀವು ನನ್ನನ್ನು ತ್ಯಜಿಸಿದಿರಿ. ನೀವು ಬೇರೆ ದೇವರುಗಳನ್ನು ಪೂಜಿಸಿದಿರಿ. ಆದ್ದರಿಂದ ನಾನು ಮತ್ತೆ ನಿಮ್ಮನ್ನು ರಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸುತ್ತಾ ಬಂದಿರಿ; ಆದ್ದರಿಂದ ಇನ್ನು ನಾನು ನಿಮ್ಮನ್ನು ರಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:13
11 ತಿಳಿವುಗಳ ಹೋಲಿಕೆ  

ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ತಮ್ಮ ಪಿತೃಗಳನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಯೆಹೋವನನ್ನು ರೇಗಿಸಿದರು.


ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು.


ಆದರೆ ಯೆಶುರೂನು ಚೆನ್ನಾಗಿ ತಿಂದು ಕೊಬ್ಬಿ ಅಗಡಾಗಿ ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿತು.


ಹೋಗಿ ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯ ಮಾಡಲಿ ಅಂದನು.


ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲ್ಯರು ತಿರುಗಿಕೊಂಡು ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ ಸೇವಿಸಿ ಅವುಗಳಿಗೆ ಅಡ್ಡಬಿದ್ದರು; ಅವರು ಈ ತಮ್ಮ ದುರ್ಮಾರ್ಗವನ್ನೂ ಮೊಂಡತನವನ್ನೂ ಬಿಡಲೇ ಇಲ್ಲ.


ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನಿಗೆ ಹೆದರಿ ಯೆರೂಸಲೇವಿುನಲ್ಲಿ ಕೂಡಿದ್ದ ಯೆಹೂದ್ಯಪ್ರಧಾನರ ಬಳಿಗೂ ಬಂದು ಅವರಿಗೆ - ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟು ಬಿಟ್ಟಿದ್ದೇನೆಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು.


ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು