Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:18 - ಕನ್ನಡ ಸತ್ಯವೇದವು J.V. (BSI)

18 ಗಿಲ್ಯಾದಿನ ಜನರೂ ಅಧಿಪತಿಗಳೂ - ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನಾವನು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡೇವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಗಿಲ್ಯಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಗಿಲ್ಯಾದಿನ ಜನರು ಹಾಗು ಅಧಿಪತಿಗಳು, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕಬಲ್ಲವನಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡಬಹುದಲ್ಲಾ,” ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುತ್ತಿದ್ದ ಜನನಾಯಕರು, “ಅಮ್ಮೋನಿಯರ ಮೇಲೆ ಧಾಳಿಮಾಡಲು ಯಾರು ನಮ್ಮ ಮುಂದಾಳಾಗುತ್ತಾರೋ ಆ ವ್ಯಕ್ತಿಯೇ ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುವ ಜನರೆಲ್ಲರಿಗೂ ನಾಯಕನಾಗುತ್ತಾನೆ” ಎಂದು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಗಿಲ್ಯಾದಿನ ಜನರೂ, ಪ್ರಧಾನರೂ ಒಬ್ಬರಿಗೊಬ್ಬರು, “ಯಾವನು ಅಮ್ಮೋನಿಯರ ಮೇಲೆ ಯುದ್ಧಮಾಡಲಾರಂಭಿಸುವನೋ, ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ತಲೆಯಾಗಿರುವನು,” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:18
10 ತಿಳಿವುಗಳ ಹೋಲಿಕೆ  

ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು; ಜನರು ಅವನನ್ನು ಅಧಿಪತಿಯನ್ನಾಗಿಯೂ ನಾಯಕನನ್ನಾಗಿಯೂ ನೇವಿುಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ವಿುಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.


ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕರು; ದೇಶದಲ್ಲಿ ಪ್ರಧಾನರೇ ಇಲ್ಲ.


ಅವರು - ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ! ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು; ಇದಲ್ಲದೆ ಅವನ ಕುಟುಂಬಕ್ಕೆ ಸರ್ವಮಾನ್ಯವನ್ನು ಕೊಡುವನು ಎಂದು ಮಾತಾಡಿಕೊಳ್ಳುತ್ತಿದ್ದರು.


ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರುಷ ಪಾಲಿಸಿದನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಪಟ್ಟಣಗಳಲ್ಲೊಂದರಲ್ಲಿ ಸಮಾಧಿ ಮಾಡಿದರು.


ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು - ಕಾನಾನ್ಯರೊಡನೆ ಯುದ್ಧಮಾಡುವದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ಯೆಹೋವನನ್ನು ಕೇಳಲು


ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳುಕೊಳ್ಳಲು ಇಸ್ರಾಯೇಲ್ಯರು ಕೂಡಿ ವಿುಚ್ಪೆಯಲ್ಲಿ ಪಾಳೆಯಮಾಡಿಕೊಂಡರು.


ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರವಿುಯಾಗಿದ್ದನು. ಅವನು ಗಿಲ್ಯಾದನಿಗೆ ಒಬ್ಬ ಸೂಳೆಯಲ್ಲಿ ಹುಟ್ಟಿದವನು.


ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಸ್ವಲ್ಪದಿನಗಳಾದ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು