Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:20 - ಕನ್ನಡ ಸತ್ಯವೇದವು J.V. (BSI)

20 ಏನಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿ ಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದೇನೆಂದರೆ ಬಲಿಪೀಠದಿಂದ ಆಕಾಶಕ್ಕೆ ಹೋಗುತ್ತಿದ್ದ ಅಗ್ನಿಜ್ವಾಲೆಯೊಳಗೆ ಅವನು ಮೇಲಕ್ಕೇರಿಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲಾಗಿ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮಾನೋಹ ಮತ್ತು ಅವನ ಹೆಂಡತಿಯ ಕಣ್ಣೆದುರಿನಲ್ಲಿಯೇ ಯಜ್ಞವೇದಿಕೆಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯಲ್ಲಿ ಆ ಯೆಹೋವನ ದೂತನು ಆಕಾಶಕ್ಕೆ ಏರಿ ಹೋದನು. ಮಾನೋಹ ಮತ್ತು ಅವನ ಹೆಂಡತಿ ಅದನ್ನು ಕಂಡು ನೆಲದ ಮೇಲೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳುವಾಗ, ಯೆಹೋವ ದೇವರ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋಹನೂ, ಅವನ ಹೆಂಡತಿಯೂ ಕಂಡು, ನೆಲದ ಮೇಲೆ ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:20
14 ತಿಳಿವುಗಳ ಹೋಲಿಕೆ  

ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವದನ್ನೂ ಚಾಚಿದ ಕೈಯಲ್ಲಿ ಯೆರೂಸಲೇವಿುಗೆ ವಿರೋಧವಾಗಿ ಹಿರಿದ ಕತ್ತಿಯಿರುವದನ್ನೂ ಕಂಡಾಗ ಅವನೂ ಹಿರಿಯರೂ ಗೋಣೀತಟ್ಟನ್ನು ಹೊದ್ದುಕೊಂಡವರಾಗಿ ಬೋರ್ಲಬಿದ್ದರು;


ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಬಿಲ್ಲು ಹೊಳೆಯುವಂತೆ ಆತನ ಸುತ್ತಣ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದು ಕಣ್ಣಿಗೆ ಬೀಳಲು ನಾನು ಅಡ್ಡಬಿದ್ದು ಮಾತಾಡುವಾತನ ವಾಣಿಯನ್ನು ಕೇಳಿದೆನು.


ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲಬಿದ್ದರು.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿ ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ


ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತಾಡಿ -


ಆದರೂ ಅವನು ಮಾತಾಡುವ ಸದ್ದನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಅಡಿಮೊಗವಾಗಿ ಅಡ್ಡಬಿದ್ದಿದ್ದೆನು.


ಅವುಗಳ ತಲೆಗಳ ಮೇಲ್ಗಡೆಯ ನೆಲಗಟ್ಟಿನ ಮೇಲೆ ಇಂದ್ರ ನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣಮಾಡಿದ್ದಾನೆ.


ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಒಂದು ಏಫಾ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.


ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.


ದಾವೀದನು ತನ್ನ ಬಳಿಗೆ ಬರುವದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟುಹೋಗಿ ಅವನಿಗೆ ಅಡ್ಡಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು