Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:14 - ಕನ್ನಡ ಸತ್ಯವೇದವು J.V. (BSI)

14 ಆಗ ಅವನು - ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಚ್ಚಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಂಸೋನನು ಅವರಿಗೆ ಈ ಒಗಟನ್ನು ಹೇಳಿದನು: “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು. ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು.” ಆ ಮೂವತ್ತು ಜನರು ಮೂರು ದಿನಗಳವರೆಗೆ ಒಗಟಿನ ಅರ್ಥವನ್ನು ಕಂಡುಹಿಡಿಯಲು ಪ್ರಯತ್ನ ಮಾಡಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವನು ಅವರಿಗೆ ಹೇಳಿದ್ದೇನೆಂದರೆ, “ತಿಂದು ಬಿಡುವಂಥದ್ದರಿಂದ ತಿನ್ನತಕ್ಕದ್ದು ಹೊರಟಿತು. ಬಲಿಷ್ಠವಾದದ್ದರಿಂದ ಸಿಹಿಯು ಹೊರಟಿತು.” ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:14
20 ತಿಳಿವುಗಳ ಹೋಲಿಕೆ  

ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ, ಮಾಂಸ ಇವುಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು; ಹಳ್ಳದ ನೀರು ಅವನಿಗೆ ಪಾನವಾಗಿತ್ತು.


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಈ ಎಲ್ಲಾ ವಿಷಯಗಳಲ್ಲಿ ಪೂರ್ಣ ಜಯಶಾಲಿಗಳಾಗುತ್ತೇವೆ.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ಅವನು - ಯಾರಾದರೂ ನನಗೆ ಅರ್ಥ ತಿಳಿಸಿಕೊಟ್ಟ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ - ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕೂತುಕೋ ಎಂಬದಾಗಿ ಫಿಲಿಪ್ಪನನ್ನು ಕೇಳಿಕೊಂಡನು.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ಜ್ಞಾನವು ಮೂರ್ಖನಿಗೆ ದುರ್ಲಭ; ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.


ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವದಕ್ಕೋಸ್ಕರ ಅಲ್ಲಿಗೆ ಹೋಗಲು ಅವರಿಗೆ ದ್ರವ್ಯ ವಸ್ತ್ರ ಶ್ರೇಷ್ಠಾಯುಧ ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲುಕೊಂಡರು. ಕೊಳ್ಳೆಯು ಬಲುಹೆಚ್ಚಾಗಿದ್ದದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.


ದೂತರು ಬಂದು ಯೆಹೋಷಾಫಾಟನಿಗೆ - ಮಹಾಸಮೂಹವು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್‍ತಾಮಾರಿನಲ್ಲಿರುತ್ತಾರೆಂದು ತಿಳಿಸಿದಾಗ


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು ಅನ್ನಲು ಅವರು ಅವನಿಗೆ - ನಿನ್ನ ಒಗಟನ್ನು ಹೇಳು, ಕೇಳೋಣ ಎಂದು ಹೇಳಿದರು.


ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ - ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವದೆಲ್ಲವನ್ನೂ ಕಸಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು