Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:18 - ಕನ್ನಡ ಸತ್ಯವೇದವು J.V. (BSI)

18 ಅವರು ಏಳನೆಯ ದಿನ ಸೂರ್ಯಾಸ್ತಮಾನಕ್ಕೆ ಮೊದಲು ಅವನಿಗೆ - ಜೇನಿಗಿಂತ ಸಿಹಿಯಾದದ್ದು ಯಾವದು? ಸಿಂಹಕ್ಕಿಂತ ಕ್ರೂರವಾದದಾವದು ಎಂದು ಹೇಳಲು ಅವನು - ನೀವು ನನ್ನ ಕಡಸಿನಿಂದ ಉಳದಿದ್ದರೆ ಒಗಟನ್ನು ಬಿಚ್ಚುವದು ನಿಮ್ಮಿಂದಾಗುತ್ತಿರಲಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ಏಳನೆಯ ದಿನ ಸೂರ್ಯಾಸ್ತಮಾನಕ್ಕೆ ಮೊದಲೇ ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು” ಸಿಂಹಕ್ಕಿಂತ ಕ್ರೂರವಾದದ್ದು ಯಾವುದು?” ಎಂದು ಹೇಳಿದರು. ಅವನು, “ನೀವು ನನ್ನ ಕಡಸಿನಿಂದ ಉಳದಿದ್ದರೆ ಒಗಟನ್ನು ಬಿಡಿಸಲು ನಿಮ್ಮಿಂದಾಗುತ್ತಿರಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಔತಣದ ಏಳನೆಯ ದಿನ ಸೂರ್ಯಾಸ್ತಮಾನಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ಅರ್ಥ ಗೊತ್ತಾಯಿತು. ಅವರು ಸಂಸೋನನಲ್ಲಿಗೆ ಬಂದು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು; ಸಿಂಹಕ್ಕಿಂತ ಕ್ರೂರವಾದದ್ದು ಯಾವುದು” ಎಂದರು. ಅದಕ್ಕೆ ಸಂಸೋನನು ಅವರಿಗೆ, “ನೀವು ನನ್ನ ಹಸುವಿನಿಂದ ನೇಗಿಲು ಹೊಡೆಯದ್ದಿದ್ದರೆ ಒಗಟನ್ನು ಬಿಡಿಸುವುದು ನಿಮ್ಮಿಂದ ಆಗುತ್ತಿರಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಳನೆಯ ದಿವಸದಲ್ಲಿ ಸೂರ್ಯ ಮುಳುಗುವುದಕ್ಕಿಂತ ಮುಂಚೆ ಆ ಊರಿನವರು ಅವನಿಗೆ, “ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲಿಷ್ಠವಾದದ್ದೇನು?” ಎಂದು ಹೇಳಿದರು. ಅವನು ಉತ್ತರವಾಗಿ ಅವರಿಗೆ, “ನೀವು ನನ್ನ ಕಡಸಿನಿಂದ ಉಳದೆ ಇದ್ದರೆ, ನನ್ನ ಒಗಟನ್ನು ಗ್ರಹಿಸಲಾರಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:18
6 ತಿಳಿವುಗಳ ಹೋಲಿಕೆ  

ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ರೇಗಿದವನಾಗಿ ತನ್ನ ತಂದೆಯ ಮನೆಗೆ ಹೋದನು.


ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು; ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು; ಸಿಂಹಗಳಿಗಿಂತಲೂ ಬಲವುಳ್ಳವರು.


ಯಾವದಕ್ಕೂ ಹೆದರಿ ಓರೆಯಾಗದ ಮೃಗರಾಜನಾದ ಸಿಂಹ,


ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು.


ಮುಖಗಳು ಎಂಥವುಗಳಂದರೆ ಒಂದೊಂದರ [ಮುಂದಿನ] ಮುಖವು ಮನುಷ್ಯನದು, ಬಲಗಡೆಯ ಮುಖವು ಸಿಂಹನದು, ಎಡಗಡೆಯ ಮುಖವು ಹೋರಿಯದು, [ಹಿಂದಿನ] ಮುಖವು ಗರುಡಪಕ್ಷಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು