Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:14 - ಕನ್ನಡ ಸತ್ಯವೇದವು J.V. (BSI)

14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಲೇಹಿಗೆ ಬಂದಾಗ, ಫಿಲಿಷ್ಟಿಯರು ಅವನ ಎದುರಾಗಿ ಆರ್ಭಟಿಸುತ್ತಾ ಬಂದರು. ಯೆಹೋವ ದೇವರ ಆತ್ಮ ಅವನ ಮೇಲೆ ಬಲವಾಗಿ ಬಂದದ್ದರಿಂದ, ಅವನ ತೋಳುಗಳಲ್ಲಿ ಕಟ್ಟಿದ್ದ ಸೆಣಬಿನ ಹಗ್ಗಗಳು ಬೆಂಕಿಯಲ್ಲಿ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಯಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:14
22 ತಿಳಿವುಗಳ ಹೋಲಿಕೆ  

ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ರೇಗಿದವನಾಗಿ ತನ್ನ ತಂದೆಯ ಮನೆಗೆ ಹೋದನು.


ಅವರು ಸುತ್ತಲೂ ನನ್ನನ್ನು ಮುತ್ತಿದರು; ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.


ನಾನು ಒಡನೆ ಅದನ್ನು ಬೆನ್ನಟ್ಟಿ ಹೊಡೆದು ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬಿದ್ದರೆ ಅದನ್ನು ಗದ್ದಹಿಡಿದು ಬಡಿದು ಕೊಂದುಹಾಕುತ್ತಿದ್ದೆನು.


ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಅತ್ಯಂತ ಕುಪಿತನಾಗಿ


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು.


ಸತ್ಯ ಸಯುಜನೇ, ಅವರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದವೆ.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಆತನೇ ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.


ದುಷ್ಟರ ಉತ್ಸಾಹಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲರೂ ಭೂವಿುಯು ಪ್ರತಿಧ್ವನಿಕೊಡುವಷ್ಟು ಆರ್ಭಟಿಸಿದರು.


ಜನರು ಸಂಸೋನನನ್ನು ನೋಡಿ - ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದು ಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಗಾನಮಾಡಿದರು.


ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ - ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.


ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ - ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೆ ಆ ತಂತಿಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು.


ನಿಶ್ಚಯವಾಗಿ ಅವರಿಗೆ ಕೊಳ್ಳೆಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬ ಸೈನಿಕನಿಗೆ ಒಬ್ಬಿಬ್ಬರು ದಾಸಿಯರೂ ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ವಸ್ತ್ರಗಳೂ ಕಂಠಮಾಲೆಯೂ ದೊರಕಿರುತ್ತವೆ ಎಂಬದೇ.


ಇಸ್ರಾಯೇಲ್ಯರು ಓಡಿಹೋದರೆಂಬ ವರ್ತಮಾನವು ಫರೋಹನಿಗೆ ತಿಳಿದುಬಂದಾಗ ಅವರ ವಿಷಯದಲ್ಲಿ ಫರೋಹನ ಮನಸ್ಸೂ ಅವನ ಪರಿವಾರದವರ ಮನಸ್ಸೂ ಬೇರೆಯಾಯಿತು. ಅವರು - ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲ್ಯರನ್ನು ಯಾತಕ್ಕೆ ಹೋಗಗೊಡಿಸಿದೆವು ಅಂದುಕೊಂಡರು.


ಫರೋಹನು ಅದನ್ನು ಕಂಡು - ಇಸ್ರಾಯೇಲ್ಯರಿಗೆ ದಾರಿತಪ್ಪಿತು, ಎಲ್ಲಾ ಕಡೆಯಲ್ಲಿಯೂ ಅರಣ್ಯವು ಅವರನ್ನು ಸುತ್ತಿಕೊಂಡದೆ ಅಂದುಕೊಳ್ಳುವನು.


ಅದಕ್ಕೆ ಅವರು - ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗಿರಿಯಿಂದ ತಂದರು.


ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು.


ಆಗ ಯೆಹೋವನ ಆತ್ಮವು ನಿನ್ನ ಮೇಲೂ ಬರುವದರಿಂದ ನೀನೂ ಮಾರ್ಪಟ್ಟು ಪ್ರವಾದಿಸುವಿ.


ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವದನ್ನು ಕಂಡನು. ದೇವರ ಆತ್ಮವು ಅವನ ಮೇಲೆ ಬಂದದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು