Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:25 - ಕನ್ನಡ ಸತ್ಯವೇದವು J.V. (BSI)

25 ಅವರು ಆನಂದಲಹರಿಯಲ್ಲಿದ್ದಾಗ - ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು; ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದಮಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ಆನಂದಲಹರಿಯಲ್ಲಿದ್ದಾಗ, “ನಮ್ಮ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿ,” ಎಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ಅವರೆಲ್ಲರ ಮನರಂಜಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಉತ್ಸವದಲ್ಲಿ ಜನರು ಸಂತೋಷವಾಗಿದ್ದರು. ಅವರು, “ಸಂಸೋನನನ್ನು ಕರೆದು ತನ್ನಿ. ನಾವು ಅವನ ತಮಾಷೆಯನ್ನು ನೋಡಬೇಕು” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ತಂದು ಅವನನ್ನು ಅಪಹಾಸ್ಯ ಮಾಡಿದರು. ಸಂಸೋನನನ್ನು ಅವರ ದೇವರಾದ ದಾಗೋನನ ಮಂದಿರದಲ್ಲಿ ಎರಡು ಕಂಬಗಳ ಮಧ್ಯದಲ್ಲಿ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅಲ್ಲಿ ಅವರು ಸಂಭ್ರಮವಾಗಿರುವಾಗ, “ನಮ್ಮ ಮುಂದೆ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿರಿ,” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರೆತಂದಾಗ, ಅವನು ಅವರ ಮುಂದೆ ವಿನೋದ ಮಾಡಬೇಕಾಯಿತು. ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:25
23 ತಿಳಿವುಗಳ ಹೋಲಿಕೆ  

ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.


ಅವರಿಬ್ಬರೂ ಕೂತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ತಿರಿಗಿ ಅವನಿಗೆ - ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು ಎಂದು ಹೇಳಿದರೂ ಅವನು ಹೊರಡುವದಕ್ಕಿದ್ದನು;


ಆ ಊರಿನವರು ಒಂದಾನೊಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು ಆಲೆಗಳಲ್ಲಿ ರಸತೆಗೆದು ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ - ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನನ್ನು ಪರಿಹಾಸ್ಯಮಾಡಿದರು.


ಆದರೆ ಇಗೋ, ಉಲ್ಲಾಸ, ಹರ್ಷ, ದನಕೊಯ್ಯುವದು, ಕುರಿಕಡಿಯುವದು, ಮಾಂಸತಿನ್ನುವದು, ದ್ರಾಕ್ಷಾರಸ ಕುಡಿಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವದು [ಇವೇ ನಿಮ್ಮ ಕಾರ್ಯ].


ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಆಡಿಕೆಗೆ ಕಾರಣವಾಗಿದೆ.


ಊರುಬಾಗಲಲ್ಲಿ ಕೂತುಕೊಳ್ಳುವವರ ಆಡಿಕೆಗೆ ಗುರಿಯಾಗಿದ್ದೇನೆ. ಕುಡಿಕರು ನನ್ನ ವಿಷಯ ಹಾಡಿ ಗೇಲಿಮಾಡುತ್ತಾರೆ.


ಈ ನಿರ್ಣಯವು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಸುರಾಪಾನ ಮಾಡುವದಕ್ಕೆ ಕೂತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೆ ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.


ಅನಂತರ ಅವನೂ ಅವನ ಉಪಪತ್ನಿಯೂ ಸೇವಕನೂ ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಹೊತ್ತು ಹೋಯಿತು; ಸಂಜೆಯಾಯಿತು. ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಸಾಯಂಕಾಲವಾಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು ಎಂದು ಬೇಡಿಕೊಂಡರೂ


ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರ ಬಳಿಗೆ ಬಂದನು.


ಜನರು ಸಂಸೋನನನ್ನು ನೋಡಿ - ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದು ಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಗಾನಮಾಡಿದರು.


ಆಗ ಸಂಸೋನನು ತನ್ನನ್ನು ಕೈಹಿಡಿದು ನಡಿಸುವ ಹುಡುಗನಿಗೆ - ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ ಅಂದನು.


ಏಳನೆಯ ದಿನದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸಪಾನಮಾಡಿ ಆನಂದಲಹರಿಯಲ್ಲಿದ್ದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು