Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:3 - ಕನ್ನಡ ಸತ್ಯವೇದವು J.V. (BSI)

3 ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು - ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆ ಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಟ್ಟನು.ಆಕೆ, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ. ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುತ್ತೇನೆ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೀಕನು ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ತನ್ನ ತಾಯಿಗೆ ಕೊಟ್ಟನು. ಆಗ ಅವಳು, “ನಾನು ಈ ಬೆಳ್ಳಿಯನ್ನು ಯೆಹೋವನಿಗೆ ವಿಶೇಷ ಹರಕೆಯಾಗಿ ಕೊಡುವೆನು. ಇದನ್ನು ನಾನು ನನ್ನ ಮಗನಿಗೆ ಕೊಡುವೆನು, ಅವನು ಅದರಿಂದ ಒಂದು ವಿಗ್ರಹವನ್ನು ಮಾಡಿಸಿ ಅದಕ್ಕೆ ಬೆಳ್ಳಿಯ ಹೊದಿಕೆಯನ್ನು ಹಾಕಿಸುವನು” ಎಂದು ಹೇಳಿ ಆ ಬೆಳ್ಳಿಯನ್ನು ಮಗನ ಕೈಯಲ್ಲಿ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ತನ್ನ ತಾಯಿಗೆ ತಿರುಗಿ ಕೊಟ್ಟಾಗ, ಅವನ ತಾಯಿ, “ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡುವುದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಯೆಹೋವ ದೇವರಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದ್ದೆನು; ಆದ್ದರಿಂದ ನಾನು ಅದನ್ನು ನಿನಗೆ ತಿರುಗಿ ಕೊಡುವೆನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:3
21 ತಿಳಿವುಗಳ ಹೋಲಿಕೆ  

ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ ಭೂವಿುಯಲ್ಲಾಗಲಿ ಭೂವಿುಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವದರ ರೂಪವನ್ನೂ ಮಾಡಿಕೊಳ್ಳಬಾರದು.


ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.


ಆದದರಿಂದ ನೀವು ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಂಡು ನನ್ನ ಜೊತೆಯಲ್ಲಿ ಸೇರಿಸಕೂಡದು.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಆಗ ಅವರು ಅವನಿಗೆ - ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವದೋ ಇಲ್ಲವೋ ಎಂಬದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು ಎಂದು ಬೇಡಿಕೊಳ್ಳಲು


ಒಬ್ಬ ಲೇವಿಯು ತನ್ನ ಮನೆಯಲ್ಲಿ ಯಾಜಕನಾಗಿರುವದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು ಅಂದುಕೊಂಡನು.


ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು ಅವರ ದೇವತಾಪ್ರತಿಮೆಗಳನ್ನು ಕಡಿದು ಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.


ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.


ಅವನು ಒಂದಾನೊಂದು ದಿವಸ ತನ್ನ ತಾಯಿಗೆ - ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ; ಇಗೋ, ಆ ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು ಎಂದು ಹೇಳಲು ಆಕೆಯು - ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಅಂದಳು.


ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.


ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲ್ಯರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ ಎರಕದ ನಿಮ್ಮ ಬೊಂಬೆಗಳ ಬಂಗಾರದ ಮುಲಾಮನ್ನೂ ನೀವು ಹೊಲಸು ಮಾಡಿ ಆ ವಿಗ್ರಹಗಳನ್ನು - ತೊಲಗಿ ಎಂದು ಹೊಲೆಯಂತೆ ಬಿಸಾಟುಬಿಡುವಿರಿ.


ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ತಾನು ಮಾಡಿಸಿದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರವಿಧಿ ನ್ಯಾಯಗಳನ್ನು ಅನುಸರಿಸಿ ನಡೆಯುವದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲ್ಯರ ಎಲ್ಲಾ ಊರುಗಳೊಳಗೆ ನನಗೆ ಇಷ್ಟವಾಗಿರುವ ಯೆರೂಸಲೇವಿುನಲ್ಲಿಯೂ ಸದಾಕಾಲವಿರುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು