Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:5 - ಕನ್ನಡ ಸತ್ಯವೇದವು J.V. (BSI)

5 ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈ ಮೀಕನು ‘ಏಫೋದ’ನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವಿಗ್ರಹಗಳನ್ನು ಪೂಜಿಸುವುದಕ್ಕಾಗಿ ಮೀಕನಿಗೆ ಒಂದು ಮಂದಿರವಿತ್ತು. ಮೀಕನು ಏಫೋದನ್ನೂ ವಿಗ್ರಹಗಳನ್ನೂ ಪೂಜಿಸಲು ತನ್ನ ಒಬ್ಬ ಮಗನನ್ನು ಅರ್ಚಕನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ಮೀಕ ಎಂಬವನಿಗೆ ದೇವರ ಮನೆ ಇದ್ದುದರಿಂದ ಅವನು ಒಂದು ಏಫೋದನ್ನೂ, ಪ್ರತಿಮೆಗಳನ್ನೂ ಮಾಡಿ, ತನ್ನ ಪುತ್ರರಲ್ಲಿ ಒಬ್ಬನನ್ನು ಯಾಜಕ ಸೇವೆಗೆ ಪ್ರತಿಷ್ಠೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:5
24 ತಿಳಿವುಗಳ ಹೋಲಿಕೆ  

ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ - ಈ ಗ್ರಾಮದಲ್ಲಿ ಒಂದು ಏಫೋದೂ ದೇವತಾಪ್ರತಿಮೆಗಳೂ ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬದು ನಿಮಗೆ ಗೊತ್ತುಂಟೋ?


ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದರಿಂದ ಇಸ್ರಾಯೇಲ್ಯರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.


ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ಅವನು - ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವದು ಹೇಗೆ ಅಂದನು.


ಆದರೆ ತಂದೆಯ ಮನೆಗೆ ಹೋಗುವದಕ್ಕೆ ನಿನಗೆ ಬಹಳ ಆಶೆಯಿರುವದರಿಂದ ಹೋಗಬೇಕಾಯಿತು. ಅದಿರಲಿ; ನನ್ನ ದೇವರುಗಳನ್ನು ಕದ್ದದ್ದು ಯಾಕೆ ಎಂದು ಹೇಳಿದನು.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಸುತ್ತಿಸಬೇಕು. ಆ ಹೊತ್ತಿನಿಂದ ಯಾಜಕತ್ವವು ಶಾಶ್ವತವಾದ ನಿಯಮದಿಂದ ಅವರಿಗೆ ಉಂಟಾಗುವದು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕೋದ್ಯೋಗಕ್ಕೆ ಸೇರಿಸಬೇಕು.


ಮತ್ತು ದೈವನಿರ್ಣಯದ ಚೀಲದ ಪದಕವನ್ನು ಬುಟೇದಾರಿ ಕೆಲಸದಿಂದ ಮಾಡಿಸಬೇಕು. ಅದನ್ನು ಕವಚದ ಕೆಲಸದಂತೆಯೆ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಮಾಡಿಸಬೇಕು.


ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ದೇವರಿಂದ ನೇವಿುಸಲ್ಪಟ್ಟು ವಹಿಸಿಕೊಳ್ಳುತ್ತಾನೆ; ಆರೋನನು ಸಹ ದೇವರಿಂದಲೇ ನೇವಿುಸಲ್ಪಟ್ಟು ಆ ಗೌರವವನ್ನು ವಹಿಸಿಕೊಂಡನಲ್ಲಾ.


ಇಸ್ರಾಯೇಲು ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಆ ಸೌಧಗಳನ್ನು ನುಂಗಿಬಿಡುವದು.


ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪಾರಸಿಯ ರಾಜನಾದ ಕೋರೆಷನು


ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ ಲೇವಿಯರಲ್ಲದ ಕನಿಷ್ಠ ಜನರನ್ನೂ ಯಾಜಕರನ್ನಾಗಿ ನೇವಿುಸಿದನು.


ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು. ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿದಾಗ ಅವನು -


ಮಾಡಬೇಕಾದ ವಸ್ತ್ರಗಳು ಯಾವವಂದರೆ - ಪದಕದ ಚೀಲ ಮಹಾಯಾಜಕ ಕವಚ ಮೇಲಂಗಿ ವಿಚಿತ್ರವಾದ ನಿಲುವಂಗಿ ಮುಂಡಾಸ ನಡುಕಟ್ಟು ಇವುಗಳೇ. ನಿನ್ನ ಅಣ್ಣನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.


ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟನು.


ಯಾಜಕೋದ್ಯೋಗವನ್ನು ನಡಿಸುವದಕ್ಕೆ ಆರೋನನನ್ನೂ ಅವನ ಮಕ್ಕಳನ್ನೂ ನೇವಿುಸಬೇಕು. ಇತರನು ಆ ಕೆಲಸಕ್ಕೆ ಕೈಹಾಕಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.


ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲ್ಯರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.


ಬಡಗಿಯು [ಮರಕ್ಕೆ] ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಉಳಿಬಾಚಿಗಳಿಂದ ಕೆತ್ತಿ ಕೈವಾರದಿಂದ ಗುರುತಿಸಿ ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ನರನ ಅಂದದಂತೆ ರೂಪಿಸುವನು.


ಮಾರ್ಗವು ಒಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ ವಿಗ್ರಹಗಳನ್ನು ಪ್ರಶ್ನೆಕೇಳಿ ಕಾಳಿಜವನ್ನು ಪರೀಕ್ಷಿಸಿದ್ದಾನೆ.


ಅನಂತರ ಆಕೆಯು ಪೂಜೆಯ ಬೊಂಬೆಯನ್ನು ತಂದು ಹಾಸಿಗೆಯ ಮೇಲೆ ಮಲಗಿಸಿ ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ಹಾಕಿ ಕಂಬಳಿಯನ್ನು ಹೊದಿಸಿದಳು.


ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ ಬೇತೇಲಿನಲ್ಲಿ ಯೆಹೂದದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕೆಂದು ಅಪ್ಪಣೆಮಾಡಿ ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ವೇದಿಯ ಮೇಲೆ ಯಜ್ಞಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇವಿುಸಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ಎತ್ತಿಹಾಕು! ಎಲ್ಲವೂ ವ್ಯತ್ಯಸ್ತವಾಗಲಿ; ಕೆಳಗಿನದನ್ನು ಮೇಲೆ ಮಾಡು, ಮೇಲಿನದನ್ನು ಕೆಳಗೆ ಮಾಡು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು