Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:12 - ಕನ್ನಡ ಸತ್ಯವೇದವು J.V. (BSI)

12 ತಮ್ಮ ಪಿತೃಗಳನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಯೆಹೋವನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತಂದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಮುತ್ತಲಿನ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸರ್ವೇಶ್ವರನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಿದ್ದನು. ಅವರ ಪೂರ್ವಿಕರು ಯೆಹೋವನನ್ನು ಆರಾಧಿಸುತ್ತಿದ್ದರು. ಆದರೆ ಇಸ್ರೇಲರು ಯೆಹೋವನನ್ನು ಅನುಸರಿಸದೆ ತಮ್ಮ ಸುತ್ತಮುತ್ತಲಿನ ಜನರ ಸುಳ್ಳುದೇವರುಗಳನ್ನು ಪೂಜಿಸಲು ಆರಂಭಿಸಿದರು. ಆದ್ದರಿಂದ ಯೆಹೋವನಿಗೆ ಕೋಪ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಮ್ಮ ತಂದೆಗಳನ್ನು ಈಜಿಪ್ಟಿನಿಂದ ಹೊರಡಿಸಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ತಮ್ಮ ಸುತ್ತಲಿರುವ ಜನಾಂಗಗಳ ದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:12
21 ತಿಳಿವುಗಳ ಹೋಲಿಕೆ  

ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಅದಕ್ಕೆ ಜನರು - ಈ ದೇಶದವರ ಪಿತೃಗಳ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿ ಅವರೊಡನೆ ಮಾಡಿದ ನಿಬಂಧನೆಯನ್ನು ಅವರು ಉಲ್ಲಂಘಿಸಿ


ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಎಚ್ಚರಿಕೆಯಾಗಿರ್ರಿ; ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ ಕುಟುಂಬವಾಗಲಿ ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ಅವುಗಳಿಗೆ ಅಡ್ಡ ಬೀಳಲೂಬಾರದು, ಪೂಜೆಮಾಡಲೂಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಊರುಬಾಗಲವರೆಗೆ ಬಂದಿತ್ತು. ಇಸ್ರಾಯೇಲ್ಯರ ನಾಲ್ವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳು ಇದ್ದಿಲ್ಲ.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.


ಆದರೆ ಯೆಶುರೂನು ಚೆನ್ನಾಗಿ ತಿಂದು ಕೊಬ್ಬಿ ಅಗಡಾಗಿ ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿತು.


ಗಿದ್ಯೋನನು ಸತ್ತನಂತರ ಇಸ್ರಾಯೇಲ್ಯರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‍ಬೆರೀತನನ್ನು ತಮಗೆ ದೇವರು ಮಾಡಿಕೊಂಡರು.


ಐಗುಪ್ತ, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ ವಿಗ್ರಹಗಳಿಂದ ರೇಗಿಸಿದರು.


ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.


ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಾದದರಿಂದ ಆತನ ನಿಯಮವನ್ನು ಕುರಿತು ನೀವು ಮಾತಾಡಬೇಕೆಂಬದಕ್ಕಾಗಿ ಈ ಆಚಾರವು ನಿಮಗೆ ಕೈಯಲ್ಲಿ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಯೆಹೋವನು ಭುಜಬಲದಿಂದ ನಮ್ಮನ್ನು ಐಗುಪ್ತದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವದಕ್ಕೆ ಈ ಪದ್ಧತಿಯು ಕೈಗೆ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ


ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯಬಾರದು, ನೋಡಿರಿ.


ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪಿತೃಗಳು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಿ ನನ್ನನ್ನು ಬಿಟ್ಟು ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು