Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:16 - ಕನ್ನಡ ಸತ್ಯವೇದವು J.V. (BSI)

16 ಆಗ ಯೆಹೋವನು ಅವರನ್ನು ಸೂರೆ ಮಾಡುವವರ ಕೈಯಿಂದ ತಪ್ಪಿಸುವದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಸರ್ವೇಶ್ವರ ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಯೆಹೋವನು ನ್ಯಾಯಾಧೀಶರೆಂಬ ಕೆಲವು ನಾಯಕರನ್ನು ಆರಿಸಿದನು. ಈ ನಾಯಕರು ಇಸ್ರೇಲರನ್ನು ಅವರ ವೈರಿಗಳಿಂದ ಕಾಪಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೂ ಯೆಹೋವ ದೇವರು ಅವರನ್ನು ಕೊಳ್ಳೆಹೊಡೆಯುವವರ ಕೈಯಿಂದ ಬಿಡಿಸುವದಕ್ಕೋಸ್ಕರ ನ್ಯಾಯಾಧಿಪತಿಗಳನ್ನು ಎಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:16
14 ತಿಳಿವುಗಳ ಹೋಲಿಕೆ  

ಇಷ್ಟರೊಳಗೆ ಸುಮಾರು ನಾನೂರೈವತ್ತು ವರುಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.


ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದನು.


ಆದದರಿಂದ ನೀನು ಅವರನ್ನು ಬಾಧಿಸುವ ವಿರೋಧಿಗಳ ಕೈಗೆ ಒಪ್ಪಿಸಿದಿ. ಅವರು ಆ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಬಿಡಿಸಿದಿ.


ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲ್ಯರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.


ಯೆಹೋವನು ಅವನನ್ನು ಚೆನ್ನಾಗಿ ನೋಡಿ - ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಾಯೇಲ್ಯರನ್ನು ವಿುದ್ಯಾನ್ಯರಿಂದ ಬಿಡಿಸು ಎಂದು ಹೇಳಿದನು.


ಆಕೆಯು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುವಲ್ಲಿ ಇಸ್ರಾಯೇಲ್ಯರು ನ್ಯಾಯ ನಿರ್ಣಯಕ್ಕೋಸ್ಕರ ಆಕೆಯ ಬಳಿಗೆ ಬರುತ್ತಿದ್ದರು.


ಅಬೀಮೆಲೆಕನ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಎದ್ದು ಇಸ್ರಾಯೇಲ್ಯರನ್ನು ರಕ್ಷಿಸಿದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.


ನ್ಯಾಯಸ್ಥಾಪಕರು ಆಳುತ್ತಿದ್ದಾಗ ದೇಶದಲ್ಲಿ ಬರ ಬಂದದರಿಂದ ಯೆಹೂದಪ್ರಾಂತದ ಬೇತ್ಲೆಹೇವಿುನವನೊಬ್ಬನು ತನ್ನ ಹೆಂಡತಿ, ಇಬ್ಬರು ಕುಮಾರರು ಇವರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೊರಟುಹೋದನು.


ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಹತಮಾಡಿ ಇಸ್ರಾಯೇಲ್ಯರನ್ನು ರಕ್ಷಿಸಿದನು.


ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.


ಇದಲ್ಲದೆ ಅವನು ಸುಲಿಗೆಮಾಡುವವರಾದ ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಅವರನ್ನು ಮುರಿಬಡಿದು ಇಸ್ರಾಯೇಲ್ಯರನ್ನು ಅವರ ಕೈಗೆ ಸಿಕ್ಕದಂತೆ ತಪ್ಪಿಸಿದನು.


ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನೇವಿುಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವದಿಲ್ಲ. ನೀನು ಶತ್ರು ಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತುಕೊಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು