Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:2 - ಕನ್ನಡ ಸತ್ಯವೇದವು J.V. (BSI)

2 ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ, ನೀವು ಈ ನಾಡಿನ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು, ಅವರ ಬಲಿಪೀಠಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೇಕೆ ಮಾಡಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಅದಕ್ಕೆ ಪ್ರತಿಯಾಗಿ ನೀವು ಈ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ‘ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ, ಅವರ ಬಲಿಪೀಠಗಳನ್ನು ಕೆಡಿವಿಬಿಡಿರಿ,’ ಎಂದು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಏಕೆ ಮಾಡಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:2
29 ತಿಳಿವುಗಳ ಹೋಲಿಕೆ  

ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಯೆಹೋವನು ಹೀಗನ್ನುತ್ತಾನೆ, ನಿಮ್ಮ ಪಿತೃಗಳು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡದರಿಂದ ವ್ಯರ್ಥಾಚಾರವನ್ನು ಅನುಸರಿಸಿ ತಾವೇ ವ್ಯರ್ಥರಾಗಿ ನನ್ನನ್ನು ಬಿಟ್ಟು ದೂರವಾದರು?


ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್‍ನದಿಯ ನೀರನ್ನು ಕುಡಿಯಬೇಕಾದದ್ದೇನು? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? [ಯೂಫ್ರೇಟೀಸ್] ನದಿಯ ಜಲವನ್ನು ಪಾನಮಾಡಬೇಕಾದದ್ದೇನು?


ಆದದರಿಂದ ಯೆಹೋವನ ಕೋಪವು ಇಸ್ರಾಯೇಲ್ಯರ ಮೇಲೆ ಉರಿಯಹತ್ತಿತು; ಆತನು - ಈ ಜನರ ಪಿತೃಗಳಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು.


ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು


ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.


ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವದೇನಂದರೆ - ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರತಂದೆನು.


ಆಗ ಫರೋಹನು ಅಬ್ರಾಮನನ್ನು ಕರಿಸಿ - ಯಾಕೆ ಹೀಗೆ ಮಾಡಿದೆ? ಹೆಂಡತಿಯೆಂದು ಯಾಕೆ ನನಗೆ ತಿಳಿಸಲಿಲ್ಲ?


ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ - ನೀವು ಒಂದು ವೇಳೆ ಈ ನಮ್ಮ ದೇಶದ ನಿವಾಸಿಗಳೇ ಆಗಿರಬಹುದು; ಆ ಪಕ್ಷದಲ್ಲಿ ನಾವು ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುವದು ಹೇಗೆ ಎಂದು ಉತ್ತರಕೊಟ್ಟರು.


ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.


ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದರಿಂದ ಇಸ್ರಾಯೇಲ್ಯರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು