Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:25 - ಕನ್ನಡ ಸತ್ಯವೇದವು J.V. (BSI)

25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಉರುಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ಧಾಳಿಮಾಡಲು ಗಿಬೆಯ ಪಟ್ಟಣದಿಂದ ಹೊರಗೆ ಬಂತು. ಈ ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಆ ಜನರೆಲ್ಲಾ ತರಬೇತಿ ಪಡೆದ ಸೈನಿಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯಾದಿಂದ ಹೊರಗೆ ಬಂದು ಇಸ್ರಾಯೇಲರಲ್ಲಿ ಖಡ್ಗ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:25
11 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು.


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ನಾವು ನೀತಿ ತಪ್ಪಿನಡೆಯುವದರಿಂದ ದೇವರಲ್ಲಿರುವ ನೀತಿ ಪ್ರಸಿದ್ಧಿಗೆ ಬರುವದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಸ್ಥನೇನು? (ಈ ಮಾತನ್ನು ಲೋಕರೀತಿಯಾಗಿ ಆಡಿದ್ದೇನೆ.) ಎಂದಿಗೂ ಅಲ್ಲ.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಮುಗಿಲೂ ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ನೀತಿನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ಆದದರಿಂದ ಅವರು ಎರಡನೆಯ ದಿನದಲ್ಲಿಯೂ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.)


ಆಗ ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದವರೆಗೂ ಉಪವಾಸ ಮಾಡಿದರು. ಇದಲ್ಲದೆ ಅವರು ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ಹಿಡಿದುಕೊಂಡದ್ದನ್ನು ಬೆಳಿಗ್ಗೆ ಉಣ್ಣುವನು. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು.


ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದೀ; ಆಹಾ, ನನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಯುದ್ಧವು ಗಿಬ್ಯದಲ್ಲಿ ಅವರಿಗೆ ತಗಲುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು