Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:25 - ಕನ್ನಡ ಸತ್ಯವೇದವು J.V. (BSI)

25 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ; ಪ್ರತಿಯೊಬ್ಬನು ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ತನಗೆ ಸರಿತೋರಿದಂತೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:25
13 ತಿಳಿವುಗಳ ಹೋಲಿಕೆ  

ನಾವು ಈಗ ಈ ಸ್ಥಳದಲ್ಲಿ ನಡೆಯುವಂತೆ ಎಲ್ಲರೂ ತಮ್ಮತಮ್ಮ ಮನಸ್ಸಿಗೆ ತೋರಿದಂತೆ ನಡೆಯಕೂಡದು;


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಿದ್ದನು.


ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿ ಒಬ್ಬಾನೊಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇವಿುನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ದಾನ್‍ಕುಲದವರಿಗೆ ಆವರೆಗೂ ಇಸ್ರಾಯೇಲ್ಯರಲ್ಲಿ ಸ್ವಾಸ್ತ್ಯವು ಸಿಕ್ಕದ್ದರಿಂದ ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು.


ಅವರು - ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾವನು ಎಂದು ಹೇಳಿಕೊಳ್ಳುತ್ತಾರಲ್ಲಾ.


ಆ ಐದು ಮಂದಿ ಹೊರಟು ಲಯಿಷಿಗೆ ಬಂದು - ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ತಗ್ಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬದನ್ನು ತಿಳಿದುಕೊಂಡು


ಅನಂತರ ಇಸ್ರಾಯೇಲ್ಯರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು