Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:28 - ಕನ್ನಡ ಸತ್ಯವೇದವು J.V. (BSI)

28 ಅವನು ಅವರ ನಾಯಕನಾಗಿ - ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆಂದು ಹೇಳಲು ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಏಹೂದನು ಅವರಿಗೆ ನಾಯಕನಾಗಿ, “ನನ್ನನ್ನು ಹಿಂಬಾಲಿಸಿ ಬನ್ನಿ; ಸರ್ವೇಶ್ವರ ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೊಪ್ಪಿಸಿದ್ದಾರೆ,” ಎಂದನು. ಅಂತೆಯೇ ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲ ಹಿಡಿದುಕೊಂಡು ಯಾರನ್ನೂ ದಾಟಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು. ಇಸ್ರೇಲರು ಏಹೂದನನ್ನು ಹಿಂಬಾಲಿಸಿದರು. ಅವರು ಜೋರ್ಡನ್ ನದಿಯ ಹಾಯಗಡಗಳನ್ನೆಲ್ಲಾ ವಶಪಡಿಸಿಕೊಂಡರು. ಆ ಸ್ಥಳಗಳು ಮೋವಾಬಿಗೆ ಹೋಗುವ ದಾರಿಯಲ್ಲಿದ್ದವು. ಜೋರ್ಡನ್ ನದಿಯನ್ನು ದಾಟಿಹೋಗಲು ಇಸ್ರೇಲರು ಯಾರಿಗೂ ಅವಕಾಶ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರಿಗೆ, “ನೀವು ನನ್ನ ಹಿಂದೆ ಬನ್ನಿರಿ. ಏಕೆಂದರೆ ಯೆಹೋವ ದೇವರು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು. ಅವರು ಅವನ ಹಿಂದೆ ಬಂದು, ಮೋವಾಬ್ಯರಿಗೆ ಎದುರಾದ ಯೊರ್ದನ್ ನದಿ ರೇವುಗಳನ್ನು ಹಿಡಿದು, ಒಬ್ಬರನ್ನಾದರೂ ದಾಟಗೊಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:28
12 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಎಫ್ರಾಯೀವಿುಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದರೆ ಅವರು - ನೀನು ಎಫ್ರಾಯೀಮ್ಯನೋ ಎಂದು ಕೇಳುವರು.


ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು ಇಸ್ರಾಯೇಲ್ಯರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ - ಏಳಿರಿ, ಯೆಹೋವನು ವಿುದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ ಅಂದನು.


ಅದೇ ದಿವಸ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.


ಅರಸನ ಆಳುಗಳು ಯೊರ್ದನಿನ ದಾರಿಹಿಡಿದು ಹೋಗಿ ಹೊಳೆದಾಟುವ ಸ್ಥಳಗಳವರೆಗೂ ಹುಡುಕಿದರು. ಹುಡುಕುವವರು ಹೊರಟ ಕೂಡಲೆ ಊರುಬಾಗಲನ್ನು ಮುಚ್ಚಿದರು.


ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು.


ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಅಟ್ಟಿ ಅಲ್ಲಿನವರಿಗೆ - ನೀವು ವಿುದ್ಯಾನ್ಯರಿಗೆ ವಿರೋಧವಾಗಿ ಹೊರಟು ಅವರು ಬೇತ್‍ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ದಾಟಿ ಹೋಗದಂತೆ ಅಡ್ಡಗಟ್ಟಿರಿ ಎಂದು ಹೇಳಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಯೊರ್ದನ್‍ಹೊಳೆಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.


ಅವರಿಗೆ - ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು.


ಮತ್ತು ಬಾರಾಕನು ಜೆಬೂಲೂನ್ಯರನ್ನೂ ನಫ್ತಾಲ್ಯರನ್ನೂ ಕೆದೆಷಿಗೆ ಕರಿಸಿದನು; ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು; ದೆಬೋರಳೂ ಹೋದಳು.


ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರವಿುಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರನ್ನು ಒಬ್ಬನೂ ತಪ್ಪಿಸಿಕೊಳ್ಳದಂತೆ ಹತಮಾಡಿದರು.


ಅವನ ಜೊತೆಗಾರನು - ಇದು ಇಸ್ರಾಯೇಲ್ಯನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ವಿುದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿದನು ಅಂದನು.


ಐಗುಪ್ತ, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ


ಇಸ್ರಾಯೇಲ್ಯರ ಅರಸನು ಹೊರಟುಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು