Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:10 - ಕನ್ನಡ ಸತ್ಯವೇದವು J.V. (BSI)

10 ಮತ್ತು ಬಾರಾಕನು ಜೆಬೂಲೂನ್ಯರನ್ನೂ ನಫ್ತಾಲ್ಯರನ್ನೂ ಕೆದೆಷಿಗೆ ಕರಿಸಿದನು; ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು; ದೆಬೋರಳೂ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಸಿದನು. ಅವರಲ್ಲಿ ಹತ್ತುಸಾವಿರ ಮಂದಿ ಅವನ ಹೆಜ್ಜೆಹಿಡಿದು ಯುದ್ಧಕ್ಕೆ ಹೋದರು. ದೆಬೋರಳೂ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕೆದೆಷ್ ನಗರದಲ್ಲಿ ಬಾರಾಕನು ಜೆಬುಲೂನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಆ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಾರಾಕನು ಜೆಬುಲೂನನ್ನೂ, ನಫ್ತಾಲಿಯನ್ನೂ ಕೆದೆಷಿಗೆ ಕರೆದನು. ಅವನು ಹತ್ತು ಸಾವಿರ ಜನರಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:10
9 ತಿಳಿವುಗಳ ಹೋಲಿಕೆ  

ಜೆಬುಲೂನ್ಯರೂ ನಫ್ತಾಲ್ಯರೂ ಅಂಥವರಲ್ಲ; ಅವರು ಬೈಲಿನ ದಿನ್ನೆಗಳಲ್ಲಿ ತಮ್ಮ ಜೀವವನ್ನು ಮರಣಾಪತ್ತಿಗೊಪ್ಪಿಸಿದರು.


ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲ ಪ್ರಭುಗಳೂ ಇಸ್ಸಾಕಾರ್ಯರೊಡನೆ ಬಾರಾಕನೂ ಆಗವಿುಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ಸರ್ರನೆ ತಗ್ಗಿಗೆ ಬಂದರು. ರೂಬೇನ್ಯರು ನೀರಿನ ಕಾಲುವೆಗಳ ಬಳಿಯಲ್ಲಿ ಮಾಡಿದ ತೀರ್ಮಾನಗಳು ಘನವಾದವುಗಳೇ ಸರಿ.


ಆಗ ದೆಬೋರಳು ಬಾರಾಕನಿಗೆ - ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇದೇ; ನಿಶ್ಚಯವಾಗಿ ಆತನು ತಾನೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವನು ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದಿಳಿದನು.


ಇಸ್ರಾಯೇಲ್ಯರ ಅರಸನು ಬಂದ ದೂತರಿಗೆ - ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ ಅಂದನು.


ನಿನ್ನ ದಾಸಿಯು ತಂದ ಈ ಕಾಣಿಕೆಯು ಸ್ವಾವಿುಯ ಸೇವಕರಿಗೆ ಸಲ್ಲಲಿ.


ಆಕೆಯು ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನಿಗೆ - ನಿಶ್ಚಯವಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನಿನಗೆ - ಎದ್ದು ನಫ್ತಾಲಿ ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಆಗ ನಿನ್ನ ಪರಿವಾರದವರಾದ ಇವರೆಲ್ಲರೂ ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡುವರು; ಆಮೇಲೆ ನಾನು ಹೊರಟುಹೋಗುವೆನು ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್ ಜೆಬುಲೂನ್ ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು.


ದೇವರೇ, ನಿನ್ನ ಪ್ರತಾಪವನ್ನು ತೋರ್ಪಡಿಸು. ನಿನ್ನ ಮಂದಿರದಲ್ಲಿ ಆಸೀನನಾಗಿ ನಮಗೋಸ್ಕರ ಮಹತ್ಕಾರ್ಯಗಳನ್ನು ನಡಿಸಿದ ದೇವರೇ, ನಿನ್ನ ಬಲವನ್ನು ಪ್ರಕಟಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು