Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:4 - ಕನ್ನಡ ಸತ್ಯವೇದವು J.V. (BSI)

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲ್ಯರಲ್ಲಿ ನ್ಯಾಯತೀರಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ ದೆಬೋರಳೆಂಬ ಪ್ರವಾದಿನಿ ಇಸ್ರಯೇಲರಲ್ಲಿ ನ್ಯಾಯ ತೀರಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ದೆಬೋರಳೆಂಬ ಒಬ್ಬ ಪ್ರವಾದಿನಿ ಇದ್ದಳು. ಅವಳು ಲಪ್ಪೀದೋತ್ ಎಂಬವನ ಪತ್ನಿಯಾಗಿದ್ದಳು. ಅವಳು ಆಗ ಇಸ್ರೇಲಿನ ನ್ಯಾಯಾಧೀಶೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲರಿಗೆ ನ್ಯಾಯ ತೀರಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:4
13 ತಿಳಿವುಗಳ ಹೋಲಿಕೆ  

ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು; ಆಕೆ ತನ್ನ ಕನ್ಯಾವಸ್ಥೆ ಕಳೆದ ತರುವಾಯ ಗಂಡನ ಕೂಡ ಏಳು ವರುಷ ಬಾಳುವೆಮಾಡಿ ಎಂಭತ್ತು ನಾಲ್ಕು ವರುಷ ವಿಧವೆಯಾಗಿದ್ದಳು.


ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜ ವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆಯು ಯೆರೂಸಲೇವಿುನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.


ಆರೋನನ ಅಕ್ಕನಾದ ವಿುರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೋಗುತ್ತಿರಲು


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ತಲೆಯ ಮೇಲೆ ಮುಸುಕುಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿಕೊಂಡಿರುವದೂ ಒಂದೇ.


ಅವನಿಗೆ ಮದುವೆಯಾಗದ ನಾಲ್ಕು ಮಂದಿ ಹೆಣ್ಣುಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.


ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು; ಮೋಶೆಯನ್ನೂ ಆರೋನನನ್ನೂ ವಿುರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ನನ್ನ ದೇವರೇ, ಟೋಬೀಯ ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡ.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಆಕೆಯು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುವಲ್ಲಿ ಇಸ್ರಾಯೇಲ್ಯರು ನ್ಯಾಯ ನಿರ್ಣಯಕ್ಕೋಸ್ಕರ ಆಕೆಯ ಬಳಿಗೆ ಬರುತ್ತಿದ್ದರು.


ನರಪುತ್ರನೇ, ಸ್ವಕಲ್ಪಿತವಾದದ್ದನ್ನು ಕಣಿಹೇಳುವ ನಿನ್ನ ಸ್ವಕುಲಸ್ತ್ರೀಯರ ಕಡೆಗೆ ಮುಖಮಾಡಿಕೊಂಡು ಅವರಿಗೆ ಖಂಡನೆಯಾಗಿ ಹೀಗೆ ಪ್ರವಾದಿಸು.


ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಹಾಡಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು