Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:5 - ಕನ್ನಡ ಸತ್ಯವೇದವು J.V. (BSI)

5 ಆಕೆಯು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುವಲ್ಲಿ ಇಸ್ರಾಯೇಲ್ಯರು ನ್ಯಾಯ ನಿರ್ಣಯಕ್ಕೋಸ್ಕರ ಆಕೆಯ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಕೆ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ‘ದೆಬೋರಳ ಖರ್ಜೂರ ವೃಕ್ಷ’ವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುತ್ತಿದ್ದಳು. ಇಸ್ರಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಂದು ದಿನ, ಆಕೆ ದೆಬೋರಳ ಖರ್ಜೂರದ ಮರವೆಂದು ಪ್ರಸಿದ್ಧವಾದ ಮರದ ಕೆಳಗೆ ಕುಳಿತಿದ್ದಳು. ಆಗ ಇಸ್ರೇಲಿನ ಜನರು ಆಕೆಯ ಹತ್ತಿರ ಬಂದು, “ಸೀಸೆರನ ಬಗ್ಗೆ ಏನು ಮಾಡಬೇಕು?” ಎಂದು ಕೇಳಿದರು. ದೆಬೋರಳ ಖರ್ಜೂರಮರವು ಎಫ್ರಾಯೀಮ್ ಬೆಟ್ಟಪ್ರದೇಶದ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೆಬೋರಳು ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಎಫ್ರಾಯೀಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸುತ್ತಿದ್ದಳು. ಇಸ್ರಾಯೇಲರು ಅವಳ ಬಳಿಗೆ ನ್ಯಾಯಕ್ಕಾಗಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:5
18 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ರಾಮದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಘೋರರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನಹೊಂದಲೊಲ್ಲದೆ ಇದ್ದಾಳೆ.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.


ಮತ್ತು ಗಿಬ್ಯೋನ್, ರಾಮಾ, ಬೇರೋತ್, ವಿುಚ್ಪೆ, ಕೆಫೀರಾ,


ಏಮೆಕ್ಕೆಚ್ಚೀಚ್, ಬೇತ್ಅರಾಬಾ, ಚೆಮಾರಯಿಮ್,


ಬೇತೇಲ್ ಇವುಗಳ ಮೇಲೆ ಲೂಜಿಗೆ ಹೋಗುತ್ತದೆ. ಅಲ್ಲಿಂದ ಅರ್ಕೀಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ.


ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ ಸುಲಭ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.


ನನ್ನ ಮಾತನ್ನು ಕೇಳು, ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ; ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು;


ಮಾರಣೆದಿನ ಮೋಶೆ ಜನರಿಗೆ ನ್ಯಾಯತೀರಿಸುವದಕ್ಕಾಗಿ ಕೂತಿರಲು ಪ್ರಾತಃಕಾಲದಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು.


ಅಲ್ಲಿ ರೆಬೆಕ್ಕಳ ದಾದಿಯಾದ ದೆಬೋರಳು ಸತ್ತುಹೋಗಲು ಅವರು ಆಕೆಗೆ ಬೇತೇಲಿನ ತಗ್ಗಿನಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.


ಸಮುವೇಲನು ಮೃತಿಹೊಂದಿದನು. ಇಸ್ರಾಯೇಲ್ಯರೆಲ್ಲರೂ ಕೂಡಿ ಬಂದು ಅವನಿಗೋಸ್ಕರ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಅರಣ್ಯಕ್ಕೆ ಹೋದನು.


ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ


ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ; ನಾನು ವಿಚಾರಣೆಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ ಎಂದು ಹೇಳಿದನು.


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲ್ಯರಲ್ಲಿ ನ್ಯಾಯತೀರಿಸುತ್ತಿದ್ದಳು.


ಒಂದು ದಿವಸ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕೂತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ಗೊತ್ತಾಗಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು.


ಅಲ್ಲಿ ಅವನ ಸ್ವಂತ ಮನೆಯಿದ್ದದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು