Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:23 - ಕನ್ನಡ ಸತ್ಯವೇದವು J.V. (BSI)

23 ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ; ಯುದ್ಧವೀರರ ಜೊತೆಯಲ್ಲಿ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ‘ಶಾಪಹಾಕಿರಿ ಮೇರೋಜ್ ಊರಿಗೆ, ಅದರ ನಿವಾಸಿಗಳಿಗೆ ಬರಲಿಲ್ಲ ಅವರು ಯುದ್ಧವೀರರ ಜೊತೆಗೆ ಸರ್ವೇಶ್ವರನ ಸಹಾಯಕ್ಕೆ. ಶಪಿಸಿರಿ ಅವರನ್ನು’ ಎಂದು ಕರೆಗೊಟ್ಟನು ಸರ್ವೇಶ್ವರನ ದೂತನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರ ದೂತನು ಹೀಗೆ ಹೇಳುತ್ತಾನೆ, ‘ನೀವು ಮೆರೋಜನ್ನು ಶಪಿಸಿರಿ. ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ, ಏಕೆಂದರೆ ಅವರು ಯೆಹೋವ ದೇವರ ಸಹಾಯಕ್ಕೂ, ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಯೆಹೋವ ದೇವರ ಸಹಾಯಕ್ಕೂ ಬಾರದೆ ಹೋದರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:23
23 ತಿಳಿವುಗಳ ಹೋಲಿಕೆ  

ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ಕರ್ತನು ಬರುತ್ತಾನೆ.


ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವದಕ್ಕಾಗಿ ನನ್ನ ಕೈಯಿಂದ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಸೂಚಕಕಾರ್ಯ ಅದ್ಭುತಕಾರ್ಯಗಳ ಬಲದಿಂದಲೂ ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವದಕ್ಕೆ ನನಗೆ ಧೈರ್ಯಸಾಲದು.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಯೆಹೋವನು ನೇವಿುಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪತಗಲಲಿ.


ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.


ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.


ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಸ್ವಾವಿುಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ;


ಒಂದು ದಿವಸ ಸೌಲನು - ಇವನು ನನ್ನ ಕೈಯಿಂದಲ್ಲ, ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ - ನೀನು ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು; ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ ಅಂದನು.


ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು.


ಒಂದಾನೊಂದು ದಿವಸ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ - ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.


ಆಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾವೃಕ್ಷದ ಅಡಿಯಲ್ಲಿ ಕೂತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ವಿುದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷೆಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಆಕೆಯು ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನಿಗೆ - ನಿಶ್ಚಯವಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನಿನಗೆ - ಎದ್ದು ನಫ್ತಾಲಿ ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀವಿುಗೆ ಬಂದು ಇಸ್ರಾಯೇಲ್ಯರಿಗೆ - ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವದಿಲ್ಲವೆಂದು ನಾನು ಮಾತು ಕೊಟ್ಟಾಗ -


ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು; ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.


ಮತ್ತು ಯೆಹೋವನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಾಯೇಲ್ಯರು ಯಾರಾರೆಂದು ವಿಚಾರಮಾಡಿದರು. ಯಾಕಂದರೆ ವಿುಚ್ಪೆಯಲ್ಲಿ - ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದೇಹಾಕುವೆವೆಂದು ಆಣೆಯಿಟ್ಟು ಖಂಡಿತ ಪ್ರಮಾಣಮಾಡಿದ್ದರು.


ಗಿದ್ಯೋನನು ಸುಖೋತಿನವರಿಗೆ - ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ವಿುದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ ಅಂದನು.


ಆದರೆ ಸುಖೋತಿನ ಮುಖಂಡರು ಅವನಿಗೆ - ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ ಎಂದು ಉತ್ತರಕೊಟ್ಟರು.


ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.


ವಿುಚ್ಪೆಯಲ್ಲಿ ಯೆಹೋವನ ಮುಂದೆ ಸಭೆನೆರೆದಾಗ ಅದಕ್ಕೆ ಬಾರದಿದ್ದ ಇಸ್ರಾಯೇಲ್ಯರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.


ದುಷ್ಟರಿಗೆ ವಿರೋಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರೋಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು