Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:30 - ಕನ್ನಡ ಸತ್ಯವೇದವು J.V. (BSI)

30 ಆ ಜನರು ಯೋವಾಷನಿಗೆ - ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಯಾಕಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ಕಡಿದು ಹಾಕಿದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ; ಅವನು ಸಾಯಬೇಕು; ಯಾಕೆಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಗರದ ಜನರು ಯೋವಾಷನಲ್ಲಿಗೆ ಬಂದು ಯೋವಾಷನಿಗೆ, “ನೀನು ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ. ಅವನು ಬಾಳನ ಯಜ್ಞವೇದಿಕೆಯನ್ನು ಕೆಡವಿದ್ದಾನೆ. ಆ ಯಜ್ಞವೇದಿಕೆಯ ಪಕ್ಕದಲ್ಲಿದ್ದ ಅಶೇರಸ್ತಂಭವನ್ನು ಕಡಿದುಹಾಕಿದ್ದಾನೆ. ಅವನನ್ನು ನಾವು ಕೊಂದು ಬಿಡುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆ ಊರಿನವರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ, ಅವನು ಸಾಯಬೇಕು. ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ, ಅದರ ಬಳಿಯಲ್ಲಿದ್ದ ಅಶೇರ ಸ್ತಂಭವನ್ನು ಕಡಿದುಹಾಕಿದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:30
7 ತಿಳಿವುಗಳ ಹೋಲಿಕೆ  

ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.


ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡಿಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಬೇಗೆಯು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ಅಕಟವಿಕಟ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;


ಯಾಜಕರೂ ಪ್ರವಾದಿಗಳೂ ಇವನು ಮರಣ ದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರಷ್ಟೆ ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.


ಹೀಗೆ ಮಾಡಿದವರಾರು ಎಂದು ಒಬ್ಬರನ್ನೊಬ್ಬರು ವಿಚಾರಿಸುವಲ್ಲಿ ಯೋವಾಷನ ಮಗನಾದ ಗಿದ್ಯೋನನೇ ಎಂದು ಗೊತ್ತಾಗಲು


ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ - ಬಾಳನಿಗೋಸ್ಕರ ನೀವು ವ್ಯಾಜ್ಯವಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯವಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿ ಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು