Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:31 - ಕನ್ನಡ ಸತ್ಯವೇದವು J.V. (BSI)

31 ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ - ಬಾಳನಿಗೋಸ್ಕರ ನೀವು ವ್ಯಾಜ್ಯವಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯವಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿ ಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, “ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೋವಾಷನು ತನಗೆ ವಿರುದ್ಧವಾಗಿ ನಿಂತವರೆಲ್ಲರಿಗೆ, “ಬಾಳನ ಪರ ನೀವು ವ್ಯಾಜ್ಯಮಾಡಬೇಕೆ? ನೀವು ಅವನನ್ನು ರಕ್ಷಿಸಬೇಕೇ? ಅವನಿಗಾಗಿ ವ್ಯಾಜ್ಯಮಾಡುವವರು ಬೆಳಗಾಗುವಷ್ಟರಲ್ಲಿ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ತನ್ನ ಸುತ್ತಲೂ ನಿಂತಿದ್ದ ಜನರಿಗೆ ಯೋವಾಷನು, “ನೀವು ಬಾಳನ ಪಕ್ಷವನ್ನು ವಹಿಸುವಿರಾ? ನೀವು ಬಾಳನನ್ನು ರಕ್ಷಿಸುವಿರಾ? ಬಾಳನ ಪಕ್ಷದವರನ್ನು ಬೆಳಗಾಗುವುದರೊಳಗೆ ಕೊಂದು ಬಿಡಲಾಗುವುದು. ಬಾಳನು ನಿಜವಾಗಿಯೂ ದೇವರಾಗಿದ್ದರೆ ಅವನ ಯಜ್ಞವೇದಿಕೆಯನ್ನು ಬೀಳಿಸುವಾಗ ಅವನು ತನ್ನ ರಕ್ಷಣೆಯನ್ನು ಏಕೆ ಮಾಡಿಕೊಳ್ಳಲಿಲ್ಲ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ, “ನೀವು ಬಾಳನಿಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸುವಿರೋ? ಅವನಿಗಾಗಿ ವ್ಯಾಜ್ಯ ಮಾಡುವವನು ಈ ಉದಯಕಾಲದಲ್ಲೇ ಹತನಾಗಲಿ. ಅವನು ದೇವರಾದರೆ ತನ್ನ ಬಲಿಪೀಠವನ್ನು ಕೆಡವಿದ್ದರಿಂದ, ಅವನು ತನ್ನನ್ನು ರಕ್ಷಿಸಿಕೊಳ್ಳಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:31
18 ತಿಳಿವುಗಳ ಹೋಲಿಕೆ  

ಕತ್ತಲೆಗೆ ಸಂಬಂಧವಾದ ಕೃತ್ಯಗಳಿಂದ ಯಾವ ಪ್ರಯೋಜನವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬೈಲಿಗೆ ತಂದು ಖಂಡಿಸಿರಿ.


ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ನೀವು ಅವುಗಳಿಗೆ - ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂವಿುಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು ಎಂದು ಹೇಳಿರಿ.


ಇಂಥಾ ಬೊಂಬೆಗಳು ಸೌತೆಯ ತೋಟದ ಬೆದರುಗಂಬದಂತಿವೆ, ಮಾತಾಡಲಾರವು; ಹೊತ್ತುಕೊಂಡುಹೋಗಬೇಕು, ನಡೆಯಲಾರವು. ಅವುಗಳಿಗೆ ಅಂಜಬೇಡಿರಿ, ಕೇಡುಮಾಡಲಾರವು, ಮೇಲುಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ.


ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರಗದು, ಒಬ್ಬನು ಕೂಗಿಕೊಂಡರೂ ಉತ್ತರಕೊಟ್ಟು ಕಷ್ಟದಿಂದ ಅವನನ್ನು ಬಿಡಿಸಲಾರದು.


ಬೇಲ್ ದೇವತೆಯು ಬೊಗ್ಗಿದೆ, ನೆಬೋದೇವತೆಯು ಕುಗ್ಗಿದೆ, ಅವುಗಳ ಬೊಂಬೆಗಳು ದನ ಮೊದಲಾದವುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳನ್ನು ಬಳಲಿಸಿವೆ.


ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದಾಗತಕ್ಕವುಗಳನ್ನು ತಿಳಿಸಿರಿ; ನಾವು ಒಟ್ಟಿಗೆ ಕಕ್ಕಾಬಿಕ್ಕಿಯಾಗಿ ನೋಡುವಂತೆ ಮೇಲಾಗಲಿ ಕೇಡಾಗಲಿ ಏನಾದರೂ ಮಾಡಿರಿ.


ಆಗ ಎಲೀಯನು ಅವರಿಗೆ - ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್‍ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ, ಅವರನ್ನು ಲಕ್ಷಿಸಲಿಲ್ಲ.


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯಮಾಡಿ - ಗಟ್ಟಿಯಾಗಿ ಕೂಗಿರಿ; ಅವನು ದೇವರಾಗಿರುತ್ತಾನಲ್ಲಾ! ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು ಎಂದು ಹೇಳಿದನು.


ಮತ್ತು ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಪುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು


ದುಷ್ಕಾರ್ಯವನ್ನು ಮಾಡುವವರು ಬಹು ಮಂದಿ ಆದಾಗ್ಯೂ ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಆ ಜನರು ಯೋವಾಷನಿಗೆ - ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಯಾಕಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ಕಡಿದು ಹಾಕಿದ್ದಾನೆ ಅಂದರು.


ಆ ದಿವಸದಲ್ಲಿ ಅವನು - ಬಾಳನು ತನ್ನ ಯಜ್ಞವೇದಿಯನ್ನು ಕೆಡವಿದವನೊಡನೆ ತಾನೇ ವ್ಯಾಜ್ಯವಾಡಲಿ ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳನೆಂಬ ಹೆಸರಾಯಿತು.


ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು