Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:34 - ಕನ್ನಡ ಸತ್ಯವೇದವು J.V. (BSI)

34 ಆಗ ಗಿದ್ಯೋನನು ಯೆಹೋವನ ಆತ್ಮನ ಆವೇಶವುಳ್ಳವನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ಗಿದ್ಯೋನನು ಸರ್ವೇಶ್ವರಾತ್ಮಭರಿತನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತು; ಅವನಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟಿತು. ಅಬೀಯೇಜೆರನ ಗೋತ್ರದವರನ್ನು ತನ್ನನ್ನು ಹಿಂಬಾಲಿಸಲು ಕರೆಯುವುದಕ್ಕಾಗಿ ಗಿದ್ಯೋನನು ತುತ್ತೂರಿಯನ್ನು ಊದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:34
20 ತಿಳಿವುಗಳ ಹೋಲಿಕೆ  

ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವಾತ್ಮಾವೇಶವುಳ್ಳವನಾದನು; ಆಗ ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು ಅವರಿಗೆ - ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ ನಿಮ್ಮನ್ನು ಕೆಡಿಸಿಕೊಳ್ಳುವದೇಕೆ? ನೀವು ಯೆಹೋವನನ್ನು ಬಿಟ್ಟದ್ದರಿಂದ ಆತನೂ ನಿಮ್ಮನ್ನು ಬಿಟ್ಟಿದ್ದಾನೆ ಅಂದನು.


ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.


ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲ್ಯರು ಅವನ ಬಳಿಗೆ ಬಂದು ಗಟ್ಟಾ ಇಳಿದು ಅವನ ಸಂಗಡ ಹೊರಟರು.


ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು.


ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿಕೊಂಡಿರಿ.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


ಯೆಹೋವನ ಆತ್ಮವು ಸೌಲನನ್ನು ಬಿಟ್ಟುಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದದರಿಂದ


ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಅತ್ಯಂತ ಕುಪಿತನಾಗಿ


ಆಗ ಯೆಹೋವನ ಆತ್ಮವು ನಿನ್ನ ಮೇಲೂ ಬರುವದರಿಂದ ನೀನೂ ಮಾರ್ಪಟ್ಟು ಪ್ರವಾದಿಸುವಿ.


ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.


ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ರೇಗಿದವನಾಗಿ ತನ್ನ ತಂದೆಯ ಮನೆಗೆ ಹೋದನು.


ಇದಲ್ಲದೆ ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್‍ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸಹತ್ತಿತು.


ಆಗ ಅವನು ಅವರಿಗೆ - ನೀವು ಮಾಡಿದ ಕಾರ್ಯಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದೆನು? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ.


ಆಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾವೃಕ್ಷದ ಅಡಿಯಲ್ಲಿ ಕೂತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ವಿುದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷೆಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬವರ ವಂಶದವರಿಗೆ [ಯೊರ್ದನಿನ ಈಚೆಯಲ್ಲಿ] ಸ್ವಾಸ್ತ್ಯವು ಸಿಕ್ಕಿತು.


ನೀನು ಎರಡನ್ನೂ ಊದಿಸುವಾಗ ಜನಸಮೂಹದರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಲಿಗೆ ಕೂಡಿಬರಬೇಕು.


ಬೇರೆ ಇಸ್ರಾಯೇಲ್ಯರನ್ನು ಅವರವರ ಮನೆಗಳಿಗೆ ಕಳುಹಿಸಿದನು. ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಠಾಣವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಈ ಸಂಗತಿಯು ಎಲ್ಲಾ ಇಬ್ರಿಯರಿಗೂ ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.


ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಮಂದಿ ಮನಸ್ಸೆಯವರು ಬಂದು ಅವನನ್ನು ಕೂಡಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನಾಗಲಿಲ್ಲ; ಅವರ ಪ್ರಭುಗಳು - ಇವನು ನಮ್ಮ ತಲೆಗಳನ್ನು ಕಡಿದು ತಿರಿಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು ಎಂಬದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು