Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:1 - ಕನ್ನಡ ಸತ್ಯವೇದವು J.V. (BSI)

1 ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ವಿುದ್ಯಾನ್ಯರ ದಂಡಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ‘ಯೆರುಬ್ಬಾಳ’ ಎನಿಸಿಕೊಂಡ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೆಳಗಿನ ಜಾವ ಯೆರುಬ್ಬಾಳನು (ಗಿದ್ಯೋನನು) ಮತ್ತು ಅವನ ಎಲ್ಲಾ ಜನರು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು. ಮಿದ್ಯಾನ್ಯರು ಮೋರೆ ಎಂಬ ಬೆಟ್ಟದ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡರು. ಇದು ಗಿದ್ಯೋನ ಮತ್ತು ಅವನ ಜನರ ಉತ್ತರಕ್ಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಗಿದ್ಯೋನನೆಂಬ ಯೆರುಬ್ಬಾಳನೂ, ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು, ಹೆರೋದಿನ ಬಾವಿಯ ಬಳಿಯಲ್ಲಿ ದಂಡಿಳಿಸಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:1
14 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ ಅವನು - ಬಾಳನು ತನ್ನ ಯಜ್ಞವೇದಿಯನ್ನು ಕೆಡವಿದವನೊಡನೆ ತಾನೇ ವ್ಯಾಜ್ಯವಾಡಲಿ ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳನೆಂಬ ಹೆಸರಾಯಿತು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಕ್ಷೇತ್ರದಲ್ಲಿರುವ ಮೋರೆಯೆಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.


ಯೆಹೋಶುವನು ಬೆಳಿಗ್ಗೆ ಎದ್ದನು. ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡು ಹೊರಟರು.


ಯೆಹೋಶುವನು ಬೆಳಿಗ್ಗೆ ಎದ್ದನು; ಅವನೂ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲಿ ಇಳುಕೊಂಡರು.


ಆ ಬೆಟ್ಟಗಳು ಯೊರ್ದನ್ ಹೊಳೆಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಅವೆ.


ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಆ ರಾತ್ರಿ ದೇವರು ಹಾಗೆಯೇ ಮಾಡಿದನು; ತುಪ್ಪಟವು ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.


ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.


ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದನು.


ಹರೋದಿನವರಾದ ಶಮ್ಮ ಎಲೀಕರು, ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,


ನೀನು ವಿುದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್‍ಹಳ್ಳದ ಬಳಿಯಲ್ಲಿ ಸೀಸೆರ ಯಾಬೀನ್ ಎಂಬವರಿಗೆ ಮಾಡಿದಂತೆ ಇವರಿಗೂ ಮಾಡು.


ಇಷ್ಟರಲ್ಲಿ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲ್ಯರು ಇಜ್ರೇಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು