Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:25 - ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಅವರು ವಿುದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬವರನ್ನು ಹಿಡಿದು ಓರೇಬನನ್ನು ಓರೇಬನ ಬಂಡೆಯ ಮೇಲೆಯೂ ಜೇಬನನ್ನು ಜೇಬನ ದ್ರಾಕ್ಷೆಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ವಿುದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬುವರನ್ನು ಹಿಡಿದು ಓರೇಬನನ್ನು, ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬವರನ್ನು ಹಿಡಿದು ಓರೇಬನನ್ನು ಓರೇಬನ ಬಂಡೆಯ ಮೇಲೂ ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಜೋರ್ಡನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಎಫ್ರಾಯೀಮ್ಯರು ಮಿದ್ಯಾನ್ಯರ ಇಬ್ಬರು ನಾಯಕರನ್ನು ಹಿಡಿದುಕೊಂಡರು. ಆ ಇಬ್ಬರು ನಾಯಕರುಗಳ ಹೆಸರುಗಳು ಓರೇಬ್ ಮತ್ತು ಜೇಬ್. ಎಫ್ರಾಯೀಮ್ಯರು ಓರೇಬನನ್ನು, ಓರೇಬ್ ಬಂಡೆಯ ಮೇಲೆಯೂ ಜೇಬನನ್ನು, ಜೇಬ್ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದುಹಾಕಿದರು. ಎಫ್ರಾಯೀಮ್ಯರು ಮಿದ್ಯಾನ್ಯರನ್ನು ಬೆನ್ನಟ್ಟುತ್ತಲೇ ಹೋದರು. ಅವರು ಓರೇಬ್ ಮತ್ತು ಜೇಬನ ತಲೆಗಳನ್ನು ಕತ್ತರಿಸಿ ಅವುಗಳನ್ನು ತೆಗೆದುಕೊಂಡು ಜೋರ್ಡನ್ ನದಿಯ ಹಾಯಗಡದಲ್ಲಿದ್ದ ಗಿದ್ಯೋನನ ಬಳಿಗೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನನ್ನೂ, ಜೇಬನನ್ನೂ ಹಿಡಿದು, ಓರೇಬನನ್ನು ಓರೇಬೆಂಬ ಬಂಡೆಯಲ್ಲಿಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ, ಮಿದ್ಯಾನ್ಯರನ್ನು ಹಿಂದಟ್ಟಿ, ಓರೇಬ್, ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:25
7 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಓರೇಬನ ಬಂಡೆಯ ಹತ್ತಿರ ವಿುದ್ಯಾನ್ಯರನ್ನು ಹತಮಾಡಿದಂತೆ ಅವರ ಮೇಲೆಯೂ ಕೊರಡೆಯನ್ನು ಬೀಸುವನು; ಆತನು ದಂಡವನ್ನು ಸಮುದ್ರದ ಮೇಲೆ ಚಾಚಿ ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಅದು ಇಂದಿನವರೆಗೂ ಅದೆ. ಆಗ ಯೆಹೋವನ ರೋಷಾಗ್ನಿಯು ಅಡಗಿಹೋಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.


ಅವರಿಗೆ ಭಾರವಾದ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ವಿುದ್ಯಾನಿನ ನಾಶದಿನದಲ್ಲಿ ಮುರಿದುಬಿಟ್ಟಂತೆ ಮುರಿದುಬಿಟ್ಟಿದ್ದೀ.


ಇಗೋ, ಕೂಷಾನಿನ ಗುಡಾರಗಳು ಸಂಕಟಪಡುತ್ತಿವೆ, ವಿುದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.


ಅವರು ಎಂದೋರಿನಲ್ಲಿ ವಧಿಸಲ್ಪಟ್ಟು ಹೊಲದ ಗೊಬ್ಬರವಾಗಿಹೋದರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು