Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:9 - ಕನ್ನಡ ಸತ್ಯವೇದವು J.V. (BSI)

9 ಅದೇ ದಿವಸ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದೇ ರಾತ್ರಿ ಸರ್ವೇಶ್ವರ ಗಿದ್ಯೋನ್ಯನಿಗೆ, “ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಂದು ರಾತ್ರಿ ಯೆಹೋವನು ಗಿದ್ಯೋನನಿಗೆ, “ಏಳು, ನೀನು ಮಿದ್ಯಾನ್ಯರ ಸೈನ್ಯವನ್ನು ಸೋಲಿಸುವಂತೆ ಮಾಡುತ್ತೇನೆ. ಅವರ ಪಾಳೆಯಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ರಾತ್ರಿಯಲ್ಲಿ, ಯೆಹೋವ ದೇವರು ಅವನಿಗೆ, “ನೀನು ಎದ್ದು ಪಾಳೆಗೆ ವಿರೋಧವಾಗಿ ಇಳಿದು ಹೋಗು. ಏಕೆಂದರೆ ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:9
23 ತಿಳಿವುಗಳ ಹೋಲಿಕೆ  

ಅವನು ಅವರ ನಾಯಕನಾಗಿ - ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆಂದು ಹೇಳಲು ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.


ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು -


ಅವರು ಹೋದ ಮೇಲೆ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು - ನೀನು ಎದ್ದು ಈ ಕೂಸನ್ನೂ ಇದರ ತಾಯಿಯನ್ನೂ ಕರಕೊಂಡು ಐಗುಪ್ತದೇಶಕ್ಕೆ ಓಡಿಹೋಗಿ ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು ಅಂದನು.


ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು.


ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ ನನಗೆ


ಈ ಸಾರಿ ನೀವು ಯುದ್ಧಮಾಡುವದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇವಿುನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ನಡಿಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು ಎಂದು ಹೇಳಿದನು.


ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನು ಇಸ್ರಾಯೇಲ್ಯರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದರಿಂದ ಅವನು ಅವನನ್ನು ಪೂರ್ಣವಾಗಿ ಸೋಲಿಸಿಬಿಟ್ಟನು.


ಯೆಹೋವನು ಯೆಹೋಶುವನಿಗೆ - ಅವರಿಗೆ ಹೆದರಬೇಡ; ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವದಿಲ್ಲ ಎಂದು ಹೇಳಿದನು.


ಇದಲ್ಲದೆ ಅವರು ಯೆಹೋಶುವನಿಗೆ - ಯೆಹೋವನು ನಿಜವಾಗಿ ಆ ದೇಶವನ್ನೆಲ್ಲಾ ನಮಗೆ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿವಿುತ್ತ ಕಂಗೆಟ್ಟು ಹೋಗಿದ್ದಾರೆ ಎಂದು ತಿಳಿಸಿದರು.


ಆಗ ಯೆಹೋವನು ಯೆಹೋಶುವನಿಗೆ - ನೀನು ಅವರಿಗೆ ಹೆದರಬೇಡ; ನಾಳೆ ಇಷ್ಟೇ ಹೊತ್ತಿಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು; ಅವರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯಿದು ರಥಗಳನ್ನು ಸುಟ್ಟುಬಿಡಬೇಕು ಅಂದನು.


ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ವಿುದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳುಕೊಂಡಿತ್ತು.


ಅವರ ಮೇಲೆ ಬೀಳುವದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತಾಡಿಕೊಳ್ಳುವದನ್ನು ಲಾಲಿಸು;


ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವದರಿಂದ ಇಸ್ರಾಯೇಲ್ಯರು - ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ - ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು ಅಂದನು.


ಆಗ ಯೋನಾತಾನನು ಅವನಿಗೆ - ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ.


ಆದದರಿಂದ ಅವನು ತಿರಿಗಿ ಯೆಹೋವನನ್ನು ಕೇಳಿದನು. ಆತನು - ನೀನೆದ್ದು ಕೆಯೀಲಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು