Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:10 - ಕನ್ನಡ ಸತ್ಯವೇದವು J.V. (BSI)

10 ಜೆಬಹ, ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳುಕೊಂಡಿದ್ದರು. ಮೂಡಣ ದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜೆಬಹ ಮತ್ತು ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಯೋಧರು ಹತರಾಗಿ ಉಳಿದವರು ಇಷ್ಟೇ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜೆಬಹನೂ, ಚಲ್ಮುನ್ನನೂ ತಮ್ಮ ಸೈನ್ಯದ ಹೆಚ್ಚು ಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರಷ್ಟೂ, ಖಡ್ಗ ಹಿಡಿಯತಕ್ಕ ಒಂದು ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ, ಪೂರ್ವದೇಶದ ಸಮಸ್ತ ಜನರು ಅಲ್ಲಿ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:10
17 ತಿಳಿವುಗಳ ಹೋಲಿಕೆ  

ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ವಿುಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳು ನೂರು ಮಂದಿ ಭಟರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗ ಪ್ರಯತ್ನಿಸಿದನು; ಆದರೆ ಆಗದೆಹೋಯಿತು.


ಹೀಗೆ ಆ ದಿವಸ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಭಟರು ಸಂಹೃತರಾದರು.)


ಯೆಹೋವನು ಇಸ್ರಾಯೇಲ್ಯರಿಗೆ ಜಯಕೊಟ್ಟದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯ ಭಟರನ್ನು ಹತಮಾಡಿದರು.


ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು.


ಬೆನ್ಯಾಮೀನ್ಯರಲ್ಲದ ಇಸ್ರಾಯೇಲ್ಯರಲ್ಲಿ ನಾಲ್ಕು ಲಕ್ಷ ಭಟರಿದ್ದರು; ಇವರೆಲ್ಲರೂ ವೀರರೇ.


ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.


ಆ ದೇವಪ್ರಜಾಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಅವರಿಗೆ ಭಾರವಾದ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ವಿುದ್ಯಾನಿನ ನಾಶದಿನದಲ್ಲಿ ಮುರಿದುಬಿಟ್ಟಂತೆ ಮುರಿದುಬಿಟ್ಟಿದ್ದೀ.


ಇದಲ್ಲದೆ ಇಸ್ರಾಯೇಲ್ಯರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು ಸಮಾರ್ಯಕ್ಕೆ ಒಯ್ದರು.


ರೆಮಲ್ಯನ ಮಗನಾದ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ಅಬೀಯನೂ ಅವನ ಜನರೂ ಅವರಲ್ಲಿ ಅನೇಕಾನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲ್ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.


ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ವಿುಡಿತೆಗಳಂತೆ ಗುಂಪುಗುಂಪಾಗಿ ಬಂದರು; ಅವರೂ ಅವರ ಒಂಟೆಗಳೂ ಅಸಂಖ್ಯ. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.


ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.


ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು - ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ವಿುದ್ಯಾನ್ಯರ ಪಾಳೆಯದೊಳಗೆ ಬಂದು ಒಂದು ಡೇರೆಗೆ ತಗಲಿ ಅದನ್ನು ಅಡಿಮೇಲು ಮಾಡಿ ಬೀಳಿಸಿ ಬಿಟ್ಟಿತು ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು