Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:6 - ಕನ್ನಡ ಸತ್ಯವೇದವು J.V. (BSI)

6 ಆದರೆ ಸುಖೋತಿನ ಮುಖಂಡರು ಅವನಿಗೆ - ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬರವರನ್ನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?”, ಎಂದು ತಿರಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಸುಖೋತ್ ನಗರದ ನಾಯಕರು ಗಿದ್ಯೋನನಿಗೆ, “ನಾವು ನಿಮ್ಮ ಸೈನಿಕರಿಗೆ ಆಹಾರವನ್ನು ಏಕೆ ಕೊಡಬೇಕು? ನೀವು ಜೆಬಹನನ್ನು ಮತ್ತು ಚಲ್ಮುನ್ನನನ್ನು ಇನ್ನೂ ಬಂಧಿಸಲೇ ಇಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಸುಕ್ಕೋತಿನ ಪ್ರಧಾನರು ಅವನಿಗೆ, “ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈವಶವಾಗಿದೆಯೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:6
11 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಅರಸನು ಬಂದ ದೂತರಿಗೆ - ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ ಅಂದನು.


ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.


ಬಡವನು ಬಿನ್ನೈಸುವನು; ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.


ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ - ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರುಮರಕ್ಕೆ - ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದು ಬಿಟ್ಟಿತು.


ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ - ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ ಎಂದು ನನ್ನನ್ನು ನಿಂದಿಸಿದಿರಲ್ಲಾ;


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ; ಯುದ್ಧವೀರರ ಜೊತೆಯಲ್ಲಿ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ.


(ಅಷ್ಟರಲ್ಲಿ ವಿುದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು.) ಅವರು ಯೋಸೇಫನನ್ನು ಗುಂಡಿಯೊಳಗಿಂದ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ರೂಪಾಯಿಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.


ಆಮೇಲೆ ಅವರು ಊಟಕ್ಕೆ ಕೂತುಕೊಂಡರು. ಅಷ್ಟರಲ್ಲಿ ಅವರು ಕಣ್ಣೆತ್ತಿ ನೋಡಿ ಇಷ್ಮಾಯೇಲ್ಯರ ಗುಂಪು ಒಂಟೆಗಳ ಮೇಲೆ ಹಾಲುಮಡ್ಡಿ, ಸುಗಂಧತೈಲ, ರಕ್ತಬೋಳ ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವದನ್ನು ಕಂಡರು.


ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವವಂದರೆ - ಮೊದಲು ಹುಟ್ಟಿದವನು ನೆಬಾಯೋತ್; ಆಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್,


ಗಿದ್ಯೋನನು ಸುಖೋತಿನವರಿಗೆ - ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ವಿುದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು