Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:2 - ಕನ್ನಡ ಸತ್ಯವೇದವು J.V. (BSI)

2 ನೀವು ದಯವಿಟ್ಟು ಶೆಕೆವಿುನ ಹಿರಿಯರನ್ನು ಮಾತಾಡಿಸಿ - ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವದು ಒಳ್ಳೇದೋ ಅಥವಾ ಒಬ್ಬನೇ ಆಳುವದು ಮೇಲೋ ಎಂದು ಅವರನ್ನು ಕೇಳಿ ನಾನು ಅವರ ರಕ್ತ ಸಂಬಂಧಿಯಾಗಿದ್ದೇನೆಂಬದನ್ನು ಜ್ಞಾಪಕಪಡಿಸಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀವು ದಯವಿಟ್ಟು ಶೆಕೆಮಿನ ಹಿರಿಯರೊಡನೆ ಮಾತಾಡಬೇಕು. ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ? ಎಂದು ಅವರನ್ನು ವಿಚಾರಿಸಬೇಕು; ನಾನು ಅವರ ರಕ್ತಸಂಬಂಧಿಯಾಗಿದ್ದೇನೆಂಬುದನ್ನು ಜ್ಞಾಪಕಪಡಿಸಬೇಕು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಶೆಕೆಮಿನ ಹಿರಿಯರಿಗೆ, “‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ’ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀವು ದಯಮಾಡಿ ಶೆಕೆಮಿನ ಹಿರಿಯರಿಗೆ, ‘ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವುದು ಒಳ್ಳೆಯದೋ? ಒಬ್ಬನು ಆಳುವುದು ಒಳ್ಳೆಯದೋ?’ ಎಂದು ವಿಚಾರಿಸಿರಿ. ನಾನು ನಿಮ್ಮ ಎಲುಬೂ, ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕಮಾಡಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:2
8 ತಿಳಿವುಗಳ ಹೋಲಿಕೆ  

ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.


ಲಾಬಾನನು ಅವನಿಗೆ - ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದೀ ಎಂದು ಹೇಳಿದನು. ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ,


ಅನಂತರ ಇಸ್ರಾಯೇಲ್ಯರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಕೂಡಿ ಅವನಿಗೆ -


ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ.


ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.


ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ ಶೆಕೆವಿುನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು