Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:45 - ಕನ್ನಡ ಸತ್ಯವೇದವು J.V. (BSI)

45 ಅಬೀಮೆಲೆಕನು ಆ ದಿವಸವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸಂಹರಿಸಿ ಊರನ್ನು ಕೆಡವಿಬಿಟ್ಟು ಅಲ್ಲಿ ಉಪ್ಪನ್ನು ಎರಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸದೆಬಡಿದು ಊರನ್ನು ಕೆಡವಿ ಅಲ್ಲಿ ಉಪ್ಪನ್ನು ಎರಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ, ಪಟ್ಟಣವನ್ನು ಹಿಡಿದು, ಅದರಲ್ಲಿದ್ದ ಜನರನ್ನು ಕೊಂದು, ಪಟ್ಟಣವನ್ನು ಕೆಡವಿಬಿಟ್ಟು, ಅದರಲ್ಲಿ ಉಪ್ಪು ಎರಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:45
8 ತಿಳಿವುಗಳ ಹೋಲಿಕೆ  

ಅವರ ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ಕೆಡವಿ ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ ಬಾವಿಗಳನ್ನು ಮುಚ್ಚಿ ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ದುರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.


ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.


ಆದರೆ ಅದರ ಸುತ್ತಣ ಜವುಗು ನೆಲವೂ ಸವುಳುಹೊಂಡಗಳೂ ಸಿಹಿಯಾಗುವದಿಲ್ಲ, ಅವು ಉಪ್ಪಿನ ಗಣಿಯಾಗುವವು.


ಬುಗ್ಗೆಗಳನ್ನು ಒಣನೆಲವಾಗುವಂತೆಯೂ ಫಲಭೂವಿುಯನ್ನು ಉಪ್ಪುನೆಲವಾಗುವಂತೆಯೂ ಮಾಡಿದನು.


ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್‍ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು;


ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆವಿುನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು