Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:54 - ಕನ್ನಡ ಸತ್ಯವೇದವು J.V. (BSI)

54 ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ - ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು ಎಂದನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು,” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:54
17 ತಿಳಿವುಗಳ ಹೋಲಿಕೆ  

ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲ್ಯರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.


ಆಯುಧಗಳನ್ನು ಹೊರುವವನು - ನಿನ್ನ ಮನಸ್ಸಿನಂತೆ ಮಾಡು; ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ ಅಂದನು.


ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ - ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯತೋರಿಸಿಕೊಡುತ್ತೇವೆ ಅನ್ನಲು ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ ಎಂದು ಹೇಳಿದನು.


ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಕಾಲುಗಳಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು; ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ನಡೆದನು.


ಅವರು ಒಂದು ಜೋಡಿ ಎತ್ತು ಒಪ್ಪೊತ್ತಿನಲ್ಲಿ ಉಳುವಷ್ಟು ಭೂವಿುಯಲ್ಲೆ ಸುಮಾರು ಇಪ್ಪತ್ತು ಮಂದಿಯನ್ನು ವಧಿಸಿದರು.


ಸೌಲನು ತನ್ನ ಜೊತೆಯಲ್ಲಿದ್ದವರಿಗೆ - ನಮ್ಮನ್ನು ಬಿಟ್ಟುಹೋದವರು ಯಾರೆಂಬದನ್ನು ಲೆಕ್ಕಮಾಡಿ ನೋಡಿರಿ ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡುವಲ್ಲಿ ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ಇರುವದಿಲ್ಲವೆಂದು ತಿಳಿದುಬಂದಿತು.


ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು; ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವದಕ್ಕೆ ನೇವಿುಸಿಕೊಂಡನು.


ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಅವನ ಆಯುಧವಾಹಕನೂ ಎಲ್ಲಾ ಆಳುಗಳೂ ಅದೇ ದಿವಸದಲ್ಲಿ ಸತ್ತರು.


ನಾನು ಹತ್ತಿರ ಹೋಗಿ ಅವನು ಬಿದ್ದು ಬಿಟ್ಟರೆ ಬದುಕಲಾರನೆಂದು ನೆನಸಿ ಅವನನ್ನು ಕೊಂದುಹಾಕಿ ಅವನ ತಲೆಯ ಮೇಲಣ ಕಿರೀಟವನ್ನೂ ರಟ್ಟೆಯಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ ಅಂದನು.


ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,


ಆದದರಿಂದ ಸೌಲನು ಭೀತನಾಗಿ ತನ್ನ ಆಯುಧವಾಹಕನಿಗೆ - ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿಯನ್ನುಂಟು ಮಾಡಾರು ಎಂದು ಹೇಳಲು ಅವನು ಹೆದರಿ ಒಲ್ಲೆನು ಅಂದನು. ಆದದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಸೌಲನು ಸತ್ತದ್ದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು.


ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,


ಆಕೆಯು - ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲುಂಟಾಗುವ ಮಾನವು ನಿನಗಲ್ಲ. ಯೆಹೋವನು ಸೀಸೆರನನ್ನು ಒಬ್ಬ ಸ್ತ್ರೀಗೆ ಒಪ್ಪಿಸಿಕೊಡುವನು ಎಂದು ಹೇಳಿ ಎದ್ದು ಬಾರಾಕನೊಡನೆ ಕೆದೆಷಿಗೆ ಹೋದಳು.


ಅವನು ತಿರುಗಿಕೊಂಡು ನನ್ನನ್ನು ಕಂಡು ಕರೆದನು.


ಆಗ ಅವನು ನನಗೆ - ನೀನು ಕೃಪೆಮಾಡಿ ಹತ್ತಿರ ಬಂದು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವದರಿಂದ ನನಗೆ ಸಂಕಟ ಹಿಡಿದದೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು