Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 1:3 - ಕನ್ನಡ ಸತ್ಯವೇದವು J.V. (BSI)

3 ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವದರಿಂದ ತರುಣಿಯರು ನಿನ್ನನ್ನು ಪ್ರೀತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ಹಚ್ಚಿಕೊಂಡಿರುವ ತೈಲ ಎನಿತು ಸುವಾಸನೀಯ ಸುರಿದ ಪರಿಮಳದಂತೆ ವ್ಯಾಪ್ತ ನಿನ್ನ ನಾಮಾಂಕಿತ ಕನ್ಯೆಯರೆಲ್ಲರು ನಿನ್ನನು ಪ್ರೀತಿಸದಿರಲು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ತೈಲವು ಪರಿಮಳಭರಿತವಾಗಿದೆ; ನಿನ್ನ ಹೆಸರು ಸುಗಂಧದ್ರವ್ಯದಂತಿದೆ. ಆದ್ದರಿಂದ ಯುವತಿಯರು ನಿನ್ನನ್ನು ಪ್ರೀತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ಹಚ್ಚಿಕೊಂಡಿರುವ ಸುಗಂಧ ತೈಲದ ಪರಿಮಳವು ಮೆಚ್ಚಿಕೆಯಾಗಿದೆ. ನಿನ್ನ ಹೆಸರು ಸುರಿದ ಸುಗಂಧ ತೈಲವಾಗಿದೆ. ಆದ್ದರಿಂದ ಕನ್ಯೆಯರು ನಿನ್ನನ್ನು ಪ್ರೀತಿ ಮಾಡುತ್ತಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 1:3
26 ತಿಳಿವುಗಳ ಹೋಲಿಕೆ  

ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ;


ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.


ಪ್ರಿಯಳೇ, ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೇಮವು ದ್ರಾಕ್ಷಾರಸಕ್ಕಿಂತ ಎಷ್ಟೋ ಮೇಲು! ನಿನ್ನ ತೈಲದ ಪರಿಮಳವು ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು ಅವನ ಗಡ್ಡದ ಮೇಲೆಯೂ ಅಲ್ಲಿಂದ ಅವನ ಅಂಗಿಗಳ ಕೊರಳಪಟ್ಟಿಯವರೆಗೂ ಹರಿದುಬರುವ ಶ್ರೇಷ್ಠತೈಲದಂತೆಯೂ


ಆಕೆಯು ಬೂಟೇದಾರೀ ಕಸೂತಿಕೆಲಸದ ವಸ್ತ್ರಗಳನ್ನು ಧರಿಸಿಕೊಂಡು ಸಖಿಯರಾದ ಕನ್ಯೆಯರ ಪರಿವಾರದೊಡನೆ ಅರಸನ ಬಳಿಗೆ ಬರುವಳು.


ಆಗ ಪರಲೋಕರಾಜ್ಯವು ಆರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಎದುರುಗೊಳ್ಳುವದಕ್ಕೆ ಹೊರಟಂಥ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.


ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ.


ರಕ್ತಬೋಳ, ಧೂಪ, ವರ್ತಕರ ಸಕಲಸುಗಂಧ ದ್ರವ್ಯಗಳನ್ನು ಧೂಪಿಸಿದ ಧೂಮಸ್ತಂಭಗಳಂತೆ ಅರಣ್ಯದಿಂದ ಬರುವ ಈ ಮೆರವಣಿಗೆ ಯಾರದು?


ತೈಲವೂ ಸುಗಂಧದ್ರವ್ಯಗಳೂ ಹೇಗೋ ವಿುತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.


ನನ್ನ ನಲ್ಲನಿಗೆ ಕದತೆಗೆಯಬೇಕೆಂದು ಏಳಲು ಅಗುಳಿಯ ಹಿಡಿಗಳಲ್ಲಿ ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ಸುರಿಯಿತು.


ಮೋಶೆ ಯೆಹೋವನಿಗೆ - ಈ ಜನರನ್ನು ಆ ಸೀಮೆಗೆ ನಡಿಸಿಕೊಂಡುಹೋಗಬೇಕೆಂದು ನೀನು ನನಗೆ ಆಜ್ಞಾಪಿಸಿದಿಯಷ್ಟೆ; ನನ್ನ ಸಂಗಡ ಯಾರನ್ನು ಕಳುಹಿಸುವಿಯೋ ಅದನ್ನು ನನಗೆ ತಿಳಿಸಲಿಲ್ಲ. ನಿನ್ನ ಹೆಸರನ್ನು ಗೊತ್ತುಮಾಡಿದ್ದೇನೆಂದೂ ನಿನಗೆ ನನ್ನ ದಯೆ ದೊರಕಿತೆಂದೂ ನೀನು ನನಗೆ ಹೇಳಿದಿಯಲ್ಲಾ.


ಅರುವತ್ತು ಮಂದಿ ರಾಣಿಯರೂ ಎಂಭತ್ತು ಜನ ಉಪಪತ್ನಿಯರೂ ಲೆಕ್ಕವಿಲ್ಲದ ಯುವತಿಯರೂ ನನಗುಂಟು.


ಆತನು - ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಾಗಿ ದಾಟಿಹೋಗುವಂತೆ ಮಾಡುವೆನು; ಯೆಹೋವನ ನಾಮದ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ಯಾವನ ಮೇಲೆ ದಯೆಯಿಡುವೆನೋ ಅವನ ಮೇಲೆ ದಯೆಯಿಡುವೆನು; ಯಾರನ್ನು ಕರುಣಿಸುವೆನೋ ಅವರನ್ನು ಕರುಣಿಸುವೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು