Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:12 - ಕನ್ನಡ ಸತ್ಯವೇದವು J.V. (BSI)

12 ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಅಗುಳಿ ಹಾಕಿದ ಉದ್ಯಾನ, ಬೇಲಿಯೊಳಗಿನ ಬುಗ್ಗೆ, ಮುಚ್ಚಿ ಮುದ್ರಿಸಿದ ಬಾವಿ ಆಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನನ್ನ ಪ್ರಿಯಳು, ನನ್ನ ಮದಲಗಿತ್ತಿ ಸುಭದ್ರವಾದ ಉದ್ಯಾನವನ ಬೇಲಿಯೊಳಗಿನ ಬುಗ್ಗೆ ಮುಚ್ಚಿ ಮುದ್ರಿಸಿದ ಚಿಲುಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಪ್ರಿಯಳೇ, ನನ್ನ ವಧುವೇ, ನೀನು ಕದಹಾಕಿದ ತೋಟದಂತಿರುವೆ; ಬೇಲಿಯೊಳಗಿರುವ ಬುಗ್ಗೆಯಂತಿರುವೆ; ಮುಚ್ಚಿ ಮುದ್ರಿಸಿದ ಚಿಲುಮೆಯಂತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಪ್ರಿಯಳೇ, ನನ್ನ ವಧುವೇ, ನೀನು ಭದ್ರ ತೋಟವೂ ಬೇಲಿಯೊಳಗಿನ ಬುಗ್ಗೆಯೂ ಮುದ್ರಿಸಿದ ಬಾವಿಯೂ ಆಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:12
17 ತಿಳಿವುಗಳ ಹೋಲಿಕೆ  

ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ಭೋಜನಪದಾರ್ಥಗಳು ಹೊಟ್ಟೆಗಾಗಿಯೂ ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ ಅವೆ; ದೇವರು ಇದನ್ನೂ ಅವುಗಳನ್ನೂ ಕೂಡ ತೆಗೆದುಹಾಕುವನು. ಆದರೂ ದೇಹವು ಹಾದರಕ್ಕೋಸ್ಕರ ಇರುವಂಥದಲ್ಲ, ಕರ್ತನಿಗೋಸ್ಕರವಾಗಿದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.


ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವತನಕ ಭೂವಿುಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.


ಅದರಂತೆ ಮುತ್ತೈದೆಗೂ ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಿಲ್ಲದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ;


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.


ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು].


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹ ಪ್ರವಾಹವಾಗಿ ಬರುವರು; ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವದು; ಅವರು ಇನ್ನು ಕಳೆಗುಂದರು.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ದ್ರಾಕ್ಷೆಯು ಚಿಗುರಿದೆಯೋ, ದಾಳಿಂಬರಗಳು ಹೂಬಿಟ್ಟಿವೆಯೋ ಎಂದು ತಗ್ಗಿನ ಸಸ್ಯಗಳನ್ನು ನೋಡಲು ಬಾದಾವಿುಯ ತೋಟಕ್ಕೆ ನಾನು ಹೋಗಿದ್ದಾಗ


ನನ್ನ ಕಾಂತನು ಉದ್ಯಾನಗಳಲ್ಲಿ [ಮಂದೆಯನ್ನು] ಮೇಯಿಸುತ್ತಾ ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.


ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಕುರಿಗಳಿಗೆ ನೀರು ಕುಡಿಸಿ ತಿರಿಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುವರು.


ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿದ್ದೀ, ನಿನ್ನ ಒಂದು ಕಡೆಗಣ್ಣಿನಿಂದ, ನಿನ್ನ ಕಂಠಹಾರದ ಒಂದು ಸರದಿಂದ, ನನ್ನ ಹೃದಯವನ್ನು ವಶಮಾಡಿಕೊಂಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು