Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:14 - ಕನ್ನಡ ಸತ್ಯವೇದವು J.V. (BSI)

14 ಜಟಾಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತವಿಧಧೂಪ, ರಕ್ತಬೋಳ, ಅಗುರು, ಸಕಲ ಮುಖ್ಯ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಬೆಳೆದಿವೆ ಪಟ್ಟೆಲವಂಗ ವಿವಿಧ ಸಾಂಬ್ರಾಣಿ ಗಿಡಗಳು ರಸಗಂಧ, ಅಗರುಗಳು ಸಕಲವಿಧ ಶ್ರೇಷ್ಠ ಸುಗಂಧ ಗಿಡಮೂಲಿಕೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾರ್ಡ್, ಜಟಾಮಾಂಸಿ, ಕೇಸರಿ, ಬಜೆ, ಲವಂಗಚಕ್ಕೆ, ರಕ್ತಬೋಳ, ಅಗುರು, ಸಾಂಬ್ರಾಣಿ ಗಿಡ ಮತ್ತು ದಾಲ್ಚಿನ್ನಿ ಎಂಬ ಸುಗಂಧದ ಸಸ್ಯಗಳಿಂದಲೂ ಕೂಡಿರುವ ತೋಟಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಜಟಾಮಾಂಸಿ ಅಷ್ಟೇ ಅಲ್ಲದೆ ಕೇಸರಿಯೂ ಬಜೆಯೂ ದಾಲ್ಚಿನ್ನಿಯೂ ಸಕಲ ಸಾಂಬ್ರಾಣಿ ಗಿಡಮೂಲಿಕೆಗಳೂ ರಕ್ತಬೋಳವೂ ಅಗರೂ ಸಕಲವಿಧ ಶ್ರೇಷ್ಠ ಸುಗಂಧ ದ್ರವ್ಯಗಳೂ ಬೆಳೆದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:14
16 ತಿಳಿವುಗಳ ಹೋಲಿಕೆ  

ನೀನು ಮುಖ್ಯವಾದ ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ತೊಲೆ ಅಚ್ಚ ರಕ್ತಬೋಳ, ಇನ್ನೂರೈವತ್ತು ತೊಲೆ ಶ್ರೇಷ್ಠವಾದ ಲವಂಗಚಕ್ಕೆ, ಇನ್ನೂರೈವತ್ತು ತೊಲೆ ಸುಗಂಧವಾದ ಬಜೆ,


ನಾನು ರಕ್ತಬೋಳದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ತೆರಳಿ ಹಗಲು ತಂಪಾಗಿ ನೆರಳು ಇಳಿಯುವ ತನಕ ಚರಿಸುತ್ತಿರುವೆನು.


ನನ್ನ ಕಾಂತನು ಉದ್ಯಾನಗಳಲ್ಲಿ [ಮಂದೆಯನ್ನು] ಮೇಯಿಸುತ್ತಾ ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.


ರಕ್ತಬೋಳ, ಧೂಪ, ವರ್ತಕರ ಸಕಲಸುಗಂಧ ದ್ರವ್ಯಗಳನ್ನು ಧೂಪಿಸಿದ ಧೂಮಸ್ತಂಭಗಳಂತೆ ಅರಣ್ಯದಿಂದ ಬರುವ ಈ ಮೆರವಣಿಗೆ ಯಾರದು?


ವೆದಾನಿನವರೂ ಯಾವಾನಿನವರೂ ಊಜಾಲಿನಿಂದ ನಾನಾ ಸನುಗುಗಳನ್ನು ತಂದು ನಿನಗೆ ಒಪ್ಪಿಸಿದರು. ಉಕ್ಕುಬಜೆಲವಂಗಚಕ್ಕೆಗಳು ನಿನಗೆ ಆಮದಾದವು.


ರಾಜನು ಅತ್ತ ಓಲಗದಲ್ಲಿದ್ದಾಗ ನನ್ನ ಜಟಾಮಾಂಸಿಯು ಇತ್ತ ಪರಿಮಳವನ್ನು ಬೀರುತ್ತಿತ್ತು.


ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ, ಇವುಗಳ ಚೂರ್ಣವನ್ನು ಉದರಿಸಿದ್ದೇನೆ.


ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು.


ಇದಲ್ಲದೆ ಮೊದಲು ಒಂದು ಸಾರಿ ರಾತ್ರಿವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತಕ್ಕೊಂಡು ಅಲ್ಲಿಗೆ ಬಂದನು.


ಸಬ್ಬತ್‍ದಿನ ಕಳೆದ ಮೇಲೆ, ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಆತನ ದೇಹಕ್ಕೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡರು.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ ಅಪರಿವಿುತಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸಮಾನವಾದದ್ದು ಇಲ್ಲ.


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ ಅಪರಿವಿುತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವು ದೇಶಕ್ಕೆ ತಿರಿಗಿ ಬರಲೇ ಇಲ್ಲ.


ಉದ್ದವಾಗಿ ಚಾಚಿಕೊಂಡಿರುವ ತಗ್ಗುಗಳಂತೆಯೂ, ನದಿಯ ಬಳಿಯಲ್ಲಿರುವ ತೋಟಗಳಂತೆಯೂ ಕಾಣಿಸುತ್ತವೆ. ಯೆಹೋವನು ನೆಟ್ಟ ಅಗರು ಮರಗಳಿಗೂ ನೀರಿನ ಬಳಿಯಲ್ಲಿರುವ ದೇವದಾರು ವೃಕ್ಷಗಳಿಗೂ ಸಮಾನವಾಗಿವೆ.


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.


ನಿನ್ನ ದಿವ್ಯಾಂಬರಗಳು ರಕ್ತಬೋಳ ಅಗರು ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತಮಂದಿರಗಳೊಳಗೆ ಉತ್ಕೃಷ್ಟವಾದ್ಯಗಳು ನಿನ್ನನ್ನು ಆನಂದಗೊಳಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು