Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:14 - ಕನ್ನಡ ಸತ್ಯವೇದವು J.V. (BSI)

14 ಅವನ ಕೈಗಳು ಪೀತರತ್ನಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಕೈಗಳು ಪೀತರತ್ನಖಚಿತ ಚಿನ್ನದ ಸಲಾಕೆಗಳು ಅವನ ದೇಹ ಇಂದ್ರನೀಲಮಯವಾದ ದಂತಫಲಕವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನ ಕೈಗಳು ಪೀತರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ; ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನ ಕೈಗಳು ಗೋಮೇಧಿಕ ರತ್ನದ ಬಂಗಾರದ ಸಲಾಕೆಗಳಂತಿವೆ. ಅವನ ದೇಹ ಇಂದ್ರನೀಲಗಳಿಂದ ಹೊಳೆಯುವ ದಂತದ ಹಾಗೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:14
15 ತಿಳಿವುಗಳ ಹೋಲಿಕೆ  

ಅವರಿಗೆ ಇಸ್ರಾಯೇಲ್ಯರ ದೇವರ ದರ್ಶನವಾಯಿತು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.


ಆ ಚಕ್ರಗಳ ವರ್ಣವೂ ರಚನೆಯೂ ಹೇಗಿದ್ದವಂದರೆ - ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು [ಅಡ್ಡವಾಗಿ] ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.


ಇಗೋ, ನನ್ನ ಸೇವಕನು ಕೃತಾರ್ಥನಾಗುವನು; ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ನಿನ್ನ ಹೊಕ್ಕಳು ವಿುಶ್ರಪಾನಕದಿಂದ ತುಂಬಿರುವ ಗುಂಡುಬಟ್ಟಲು; ನಿನ್ನ ಉದರವು ನೆಲದಾವರೆಗಳಿಂದ ಅಲಂಕರಿಸಿದ ಗೋದಿಯ ರಾಶಿ;


ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಬೆರುಲ್ಲ ವೈಡೂರ್ಯಗಳೂ ಚಿನ್ನದ ಜವೆಯ ಕಲ್ಲಿಗಳಲ್ಲಿ ಸೇರಿಸಲ್ಪಟ್ಟವು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಬೆರುಲ್ಲ ವೈಡೂರ್ಯಗಳನ್ನೂ ಚಿನ್ನದ ಜವೆಯ ಕಲ್ಲಿಗಳಲ್ಲಿ ಸೇರಿಸಬೇಕು.


ಯೆಹೋವನೇ, ನಿನ್ನ ಭುಜಬಲವು ಎಷ್ಟೋ ಘನವಾದದ್ದು; ಯೆಹೋವನೇ, ನಿನ್ನ ಭುಜಬಲವು ನಿನ್ನ ಶತ್ರುಗಳನ್ನು ಪುಡಿಪುಡಿ ಮಾಡುತ್ತದೆ.


ಎರಡನೆಯ ಸಾಲಿನಲ್ಲಿ ಕೆಂಪರಲು ನೀಲ ಪಚ್ಚೆಗಳನ್ನೂ;


ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳ ಪ್ರಮಾಣದಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತುಮಾಡುವದಕ್ಕಾಗದು.


ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ವಿುಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಸಂದಣಿಯ ಕೋಲಾಹಲದಂತೆ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು