Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:2 - ಕನ್ನಡ ಸತ್ಯವೇದವು J.V. (BSI)

2 ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು; ಇಗೋ, ಎನ್ನಿನಿಯನು ಕದ ತಟ್ಟಿ ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು. ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. “ನನ್ನ ಪ್ರಿಯಳೇ, ನನ್ನ ಕಾಂತಳೇ, ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿದ್ರಿಸುತ್ತಿದ್ದರೂ, ನನ್ನ ಹೃದಯವು ಎಚ್ಚರವಾಗಿತ್ತು. ಇಗೋ! ಬಾಗಿಲು ತಟ್ಟುವ ನನ್ನ ಪ್ರಿಯನ ಶಬ್ದವಿದು: “ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ! ನನ್ನ ತಲೆ ಮಂಜಿನಿಂದ ನೆನೆದಿದೆ. ನನ್ನ ಕೂದಲು ರಾತ್ರಿಯ ಹನಿಗಳಿಂದ ತೋಯ್ದಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:2
39 ತಿಳಿವುಗಳ ಹೋಲಿಕೆ  

ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.


ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪರಿವಾಳವೇ! ನಿನ್ನ ರೂಪು ನನಗೆ ಕಾಣಿಸು, ನಿನ್ನ ದನಿ ಕೇಳಿಸು; ನಿನ್ನ ದನಿ ಎಷ್ಟೋ ಇಂಪು, ನಿನ್ನ ರೂಪು ಎಷ್ಟೋ ಅಂದ.


ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ ಏನು ನೋಡುತ್ತೀ ಎಂದು ಕೇಳಲು ನಾನು -


ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ, ಇವಳು ತಾಯಿಗೆ ಏಕಪುತ್ರಿಯು, ಹೆತ್ತವಳಿಗೆ ಆಪ್ತಳು. ಯುವತಿಯರು ನೋಡಿದಾಗ ಧನ್ಯಳೆಂದು ಹೇಳಿದರು. ರಾಣಿಯರೂ ಉಪಸ್ತ್ರೀಯರೂ ಕಂಡಾಗ ಹೀಗೆ ಪ್ರಶಂಸಿಸಿದರು -


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ ಸದಾಚಾರಿಗಳಾಗಿ ನಡೆಯುವವರು ಧನ್ಯರು.


ಇದರಿಂದ ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು ಎಂದು ಯೆಶಾಯನೆಂಬ ಪ್ರವಾದಿಯಿಂದ ಹೇಳಿರುವ ಮಾತು ನೆರವೇರಿತು.


ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವದನ್ನು ನೋಡಿ ಅನೇಕರು ಹೇಗೆ ಅವನಿಂದ ಬೆದರಿ ಬಿದ್ದರೋ


ಹೊಡೆಯುವವರಿಗೆ ಬೆನ್ನುಕೊಟ್ಟು ಕೂದಲುಕೀಳುವವರಿಗೆ ಗಡ್ಡವನ್ನು ಒಡ್ಡಿದೆನು; ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಲಿಲ್ಲ.


ಜಲದ ರಾಶಿಗಳೂ ಪ್ರೀತಿಯನ್ನು ನಂದಿಸಲಾರವು. ಪ್ರವಾಹಗಳಿಗೂ ಅದನ್ನು ಮುಣುಗಿಸಲು ಶಕ್ತಿಯಿಲ್ಲ. ಒಬ್ಬನು ತನ್ನ ಮನೆಮಾರನ್ನೆಲ್ಲಾ ಕೊಟ್ಟು ಪ್ರೀತಿಯನ್ನು ಪಡೆಯಲು ಯತ್ನಿಸಿದರೆ ಕೇವಲ ತಿರಸ್ಕಾರಕ್ಕೆ ಗುರಿಯಾಗುವನು.


ನಿನ್ನ ಮುದ್ದುಗಳು ಉತ್ತಮದ್ರಾಕ್ಷಾರಸದ ಹಾಗಿರಲಿ; ನಿದ್ರಿಸುವವರ ತುಟಿಗಳಲ್ಲಿ ಸರಾಗವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವದು.


ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರುಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.


ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿದ್ದೀ, ನಿನ್ನ ಒಂದು ಕಡೆಗಣ್ಣಿನಿಂದ, ನಿನ್ನ ಕಂಠಹಾರದ ಒಂದು ಸರದಿಂದ, ನನ್ನ ಹೃದಯವನ್ನು ವಶಮಾಡಿಕೊಂಡಿದ್ದೀ.


ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ದೋಷವೂ ಇಲ್ಲ.


ರಾತ್ರಿ ರಾತ್ರಿಯಲ್ಲಿಯೂ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು; ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.


ನನ್ನ ನಲ್ಲನು ಎನಗೆ ಹೀಗೆಂದನು - ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ಬಾ!


ಅಗೋ, ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ ಗುಡ್ಡಗಳಲ್ಲಿ ಕುಪ್ಪಳಿಸುತ್ತಾ ಬರುತ್ತಿದ್ದಾನೆ;


ಕಂದಾ, ನನ್ನ ಕಡೆಗೆ ಮನಸ್ಸುಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ನಿಮ್ಮನ್ನು ಐಗುಪ್ತದಿಂದ ಕರತಂದ ಯೆಹೋವನೆಂಬ ನಾನೇ ನಿಮ್ಮ ದೇವರು. ಅಗಲವಾಗಿ ಬಾಯಿದೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.


ಆದದರಿಂದ ಯಾಕೋಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು; ಆದರೂ ಆಕೆಯಲ್ಲಿ ಬಹಳ ಪ್ರೀತಿಯನ್ನಿಟ್ಟಿದ್ದದರಿಂದ ಅದು ಅವನಿಗೆ ಸ್ವಲ್ಪ ದಿವಸದಂತೆ ಕಾಣಿಸಿತು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನೊಳಗೆ ನಿನ್ನಲ್ಲಿದ್ದಾರೆ; ಅವರು ಯೋಗ್ಯರಾಗಿರುವದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಅವನು ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಹೊರಗೆ ಬಿಡುತ್ತಾನೆ. ಸ್ವಂತ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ; ಕುರಿಗಳು ಅವನ ಸ್ವರವನ್ನು ತಿಳುಕೊಂಡು ಅವನ ಹಿಂದೆ ಹೋಗುತ್ತವೆ.


ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.


ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.


ಆ ದಿವಸಗಳಲ್ಲಿ ಆತನು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋಗಿ ರಾತ್ರಿಯನ್ನೆಲ್ಲಾ ಪ್ರಾರ್ಥನೆಯಲ್ಲೇ ಕಳೆದನು.


ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ಹೊರಟು ಅಡವಿಯ ಸ್ಥಳಕ್ಕೆ ಹೋಗಿ ದೇವರನ್ನು ಪ್ರಾರ್ಥಿಸುತ್ತಿದ್ದನು.


ಅವನು ನನ್ನೊಡನೆ ಮಾತಾಡುತ್ತಿರುವಲ್ಲಿ ನಾನು ಮೈಮರೆತು ಅಡಿಮೊಗವಾಗಿ ಬಿದ್ದಿದ್ದೆನು; ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ -


ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು.


ಆಹಾ, ಎನ್ನಿನಿಯನೇ, ನೀನು ಎಷ್ಟು ಸುಂದರ, ಎಷ್ಟು ರಮ್ಯ! ಚಿಗುರುಗಳು ನಮ್ಮ ಮಂಚ,


ನನ್ನ ಇನಿಯನಿಗೆ ಕದತೆಗೆದೆನು; ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ಆಹಾ, ಅವನು ಮಾತಾಡಿದಾಗ ನಾನು ಮೂರ್ಛೆ ಹೋಗಿದ್ದೆನಲ್ಲಾ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ, ಎಷ್ಟು ಕೂಗಿದರೂ ಉತ್ತರವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು