Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:1 - ಕನ್ನಡ ಸತ್ಯವೇದವು J.V. (BSI)

1 ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಚರಣಗಳು ಎಷ್ಟೋ ಚಂದ! ದುಂಡಾದ ನಿನ್ನ ತೊಡೆಗಳು ಕುಶಲಶಿಲ್ಪಿಯು ಮಾಡಿದ ಆಭರಣಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸಕುವರಿಯೇ, ಕೆರಗಳನ್ನು ಮೆಟ್ಟಿ ನಿಂತಿರುವ ನಿನ್ನ ಪಾದಗಳೆಷ್ಟು ಚೆಂದ ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಮಾಡಿದ ಸ್ತಂಭ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರಾಜಕುಮಾರಿಯೇ, ಪಾದರಕ್ಷೆಗಳಲ್ಲಿರುವ ನಿನ್ನ ಪಾದಗಳು ಎಷ್ಟೋ ಸುಂದರವಾಗಿವೆ. ನಿನ್ನ ದುಂಡಾದ ತೊಡೆಗಳು ಶಿಲ್ಪಿಯು ಮಾಡಿದ ಆಭರಣಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಓ ರಾಜಪುತ್ರಿಯೇ! ಕೆರಗಳನ್ನು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದರವಾಗಿವೆ! ನಿನ್ನ ಅಂದದ ಕಾಲುಗಳು ಶಿಲ್ಪಿಯ ಕೈಕೆಲಸದ ಆಭರಣಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:1
13 ತಿಳಿವುಗಳ ಹೋಲಿಕೆ  

ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.


ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ;


ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,


ಶಿಲ್ಪಿಗಳು, ಚಮತ್ಕಾರವಾದ ಕೆಲಸ ಕಲ್ಪಿಸುವವರು, ನೀಲಿ ಧೂಮ್ರರಕ್ತವರ್ಣದ ದಾರದಿಂದಲೂ ನಾರುಬಟ್ಟೆಯಿಂದಲೂ ಬುಟೇದಾರೀ ಕೆಲಸಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ನಡಿಸುವ ಕೆಲಸಗಳನ್ನು ಕಲ್ಪಿಸುವದಕ್ಕೂ ಮಾಡುವದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.


ಮತ್ತು ದೈವನಿರ್ಣಯದ ಚೀಲದ ಪದಕವನ್ನು ಬುಟೇದಾರಿ ಕೆಲಸದಿಂದ ಮಾಡಿಸಬೇಕು. ಅದನ್ನು ಕವಚದ ಕೆಲಸದಂತೆಯೆ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಮಾಡಿಸಬೇಕು.


ಅದಲ್ಲದೆ ಅವರ ರಹಸ್ಯಾಂಗವು ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಮಾಡಿಸಬೇಕು.


ನಿನ್ನ ಹೊಕ್ಕಳು ವಿುಶ್ರಪಾನಕದಿಂದ ತುಂಬಿರುವ ಗುಂಡುಬಟ್ಟಲು; ನಿನ್ನ ಉದರವು ನೆಲದಾವರೆಗಳಿಂದ ಅಲಂಕರಿಸಿದ ಗೋದಿಯ ರಾಶಿ;


ಬಳಿಕ ಯಾಕೋಬನು ಎದೋಮ್ಯರ ದೇಶವಾಗಿರುವ ಸೇಯೀರ್‍ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ಮುಂದೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು