Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:13 - ಕನ್ನಡ ಸತ್ಯವೇದವು J.V. (BSI)

13 ಕಾಮಜನಕ ವೃಕ್ಷಗಳು ಪರಿಮಳಬೀರುತ್ತವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ ಬಗೆಬಗೆಯ ಹಳೆ ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಾಮಜನಕ ವೃಕ್ಷಗಳು ಹೀರುತ್ತಿವೆ ಪರಿಮಳ ಒಳ್ಳೊಳ್ಳೆಯ ಬಗೆಬಗೆಯ, ಹಳೆಹೊಸ ಹಣ್ಣುಗಳ ನಾನಿಟ್ಟುಕೊಂಡಿರುವೆ, ಪ್ರಿಯನೇ, ಬಾಗಿಲ ಹತ್ತಿರ ನಿನಗೋಸ್ಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕಾಮಜನಕ ಸಸಿಗಳು ಸುವಾಸನೆ ಬೀರುತ್ತವೆ. ನನ್ನ ಪ್ರಿಯನೇ, ನಾನು ನಿನಗೋಸ್ಕರ ಉಳಿಸಿದ ರುಚಿಕರವಾದ ಬಗೆಬಗೆಯ ಹೊಸ ಮತ್ತು ಹಳೆ ಹಣ್ಣುಗಳು ನಮ್ಮ ಬಾಗಿಲ ಬಳಿಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಪ್ರಿಯನೇ, ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ. ನಮ್ಮ ಬಾಗಿಲ ಬಳಿಯಲ್ಲಿ ನಿನಗೋಸ್ಕರ ನಾನು ರುಚಿಯುಳ್ಳ ಮಾಗಿದ ಹೊಸ ಹಣ್ಣುಗಳನ್ನು ಸಿದ್ಧಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:13
21 ತಿಳಿವುಗಳ ಹೋಲಿಕೆ  

ಗೋದೀ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಫಲಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ - ನಿನ್ನ ಮಗನು ತಂದಿರುವ ಕಾಮಜನಕ ಫಲಗಳಲ್ಲಿ ಕೆಲವನ್ನು ನನಗೆ ಕೊಡಮ್ಮಾ ಎಂದು ಕೇಳಿಕೊಂಡಳು.


ಆಗ ಆತನು ಅವರಿಗೆ - ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು ಮನೇಯಜಮಾನನಿಗೆ ಹೋಲಿಕೆಯಾಗಿದ್ದಾನೆ. ಅವನು ತನ್ನ ಬೊಕ್ಕಸದೊಳಗಿಂದ ಹೊಸ ವಸ್ತುಗಳನ್ನೂ ಹಳೇ ವಸ್ತುಗಳನ್ನೂ ಹೊರಗೆ ತರುತ್ತಿರುವನು ಎಂದು ಹೇಳಿದನು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಬೆಳಕಿನವರಂತೆ ನಡೆದುಕೊಳ್ಳಿರಿ. ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ನಾನು ಬಂದಾಗ ಹಣ ವಸೂಲುಮಾಡಬೇಕಾದ ಅವಶ್ಯವಾಗದಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದ ಸಂಪಾದನೆಯ ಮೇರೆಗೆ ವಾರವಾರದ ಮೊದಲನೆಯ ದಿನದಲ್ಲಿ ಗಂಟುಮಾಡಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು.


ಆದರೆ ಬರೆದಿರುವ ಪ್ರಕಾರ - ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.


ನೀವು ಬಹಳ ಫಲಕೊಡುವದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವದು; ಮತ್ತು ನನ್ನ ಶಿಷ್ಯರಾಗುವಿರಿ.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಅವಳ ವ್ಯಾಪಾರವೂ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವದು; ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲಿಸುವದು.


ಬಡಗಣ ಗಾಳಿಯೇ ಬೀಸು, ತೆಂಕಣ ಗಾಳಿಯೇ ಬಾ! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ನಿನ್ನ ಉದ್ಯಾನದಲ್ಲಿ ದಾಳಿಂಬರದ ವನ, ಉತ್ತಮಫಲ, ಜಟಾಮಾಂಸಿ, ಗೋರಂಟೆ,


ಉದ್ಯಾನ ವೃಕ್ಷಗಳಲ್ಲಿ ಸೇಬು ಹೇಗೋ ಪುರುಷರಲ್ಲಿ ನನ್ನ ಕಾಂತನು ಹಾಗೆಯೇ ಇಷ್ಟನು. ನಾನು ಅವನ ನೆರಳಿನಲ್ಲಿ ಕೂತು ಸಂತಸಗೊಂಡೆನು, ಅವನ ಫಲವು ನನ್ನ ನಾಲಿಗೆಗೆ ರುಚಿಯಾಗಿತ್ತು.


ನೀನು ನನ್ನ ತಾಯಿಯ ಸ್ತನ್ಯವನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡು ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.


ದ್ರಾಕ್ಷೆಯು ಚಿಗುರಿದೆಯೋ, ದಾಳಿಂಬರಗಳು ಹೂಬಿಟ್ಟಿವೆಯೋ ಎಂದು ತಗ್ಗಿನ ಸಸ್ಯಗಳನ್ನು ನೋಡಲು ಬಾದಾವಿುಯ ತೋಟಕ್ಕೆ ನಾನು ಹೋಗಿದ್ದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು