Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:8 - ಕನ್ನಡ ಸತ್ಯವೇದವು J.V. (BSI)

8 ನಾನು ಆ ವೃಕ್ಷವನ್ನು ಹತ್ತಿ ಹಣ್ಣಿನ ತುಂಬುಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷೆಯ ಗೊಂಚಲುಗಳಂತಿರಲಿ, ನಿನ್ನ ಶ್ವಾಸವು ಸೇಬುಹಣ್ಣುಗಳೋಪಾದಿಯಲ್ಲಿ ಪರಿಮಳಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಮರವನು ಹತ್ತಿ ಹಿಡಿಯುವೆ ರೆಂಬೆಗಳನು ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳು ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು ! ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಖರ್ಜೂರದ ಮರವನ್ನು ಹತ್ತುವೆನು. ನಾನು ಅದರ ಕೊಂಬೆಗಳನ್ನು ಹಿಡಿದುಕೊಳ್ಳುವೆನು. ನಿನ್ನ ಸ್ತನಗಳು ದ್ರಾಕ್ಷಿಯ ಗೊಂಚಲುಗಳಂತಿರಲಿ. ನಿನ್ನ ಉಸಿರಿನ ವಾಸನೆಯು ಸೇಬು ಹಣ್ಣುಗಳಂತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು, “ಆ ಖರ್ಜೂರದ ಮರವನ್ನು ಹತ್ತಿ ಅದರ ಗರಿಗಳನ್ನು ಹಿಡಿಯುವೆ,” ಎಂದುಕೊಂಡೆನು. ನಿನ್ನ ಸ್ತನಗಳು ದ್ರಾಕ್ಷಿ ಗೊಂಚಲುಗಳಂತಿರಲಿ, ನಿನ್ನ ಉಸಿರು ಸೇಬು ಹಣ್ಣಿನ ಪರಿಮಳದಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:8
10 ತಿಳಿವುಗಳ ಹೋಲಿಕೆ  

ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸ್ಥಾಪಿಸುವೆನು.


ಬಡಗಣ ಗಾಳಿಯೇ ಬೀಸು, ತೆಂಕಣ ಗಾಳಿಯೇ ಬಾ! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ, ದೀಪ ದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಆದರಿಸಿರಿ.


ಉದ್ಯಾನ ವೃಕ್ಷಗಳಲ್ಲಿ ಸೇಬು ಹೇಗೋ ಪುರುಷರಲ್ಲಿ ನನ್ನ ಕಾಂತನು ಹಾಗೆಯೇ ಇಷ್ಟನು. ನಾನು ಅವನ ನೆರಳಿನಲ್ಲಿ ಕೂತು ಸಂತಸಗೊಂಡೆನು, ಅವನ ಫಲವು ನನ್ನ ನಾಲಿಗೆಗೆ ರುಚಿಯಾಗಿತ್ತು.


ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವದರಿಂದ ತರುಣಿಯರು ನಿನ್ನನ್ನು ಪ್ರೀತಿಸುವರು.


ಈ ನಿನ್ನ ನೀಳವಾದ ಆಕಾರವು ಖರ್ಜೂರವೃಕ್ಷ, ನಿನ್ನ ಸ್ತನಗಳೇ ಅದರ ಗೊಂಚಲುಗಳು.


ದ್ರಾಕ್ಷಾಲತೆಯು ಆಶಾಭಂಗಪಟ್ಟಿದೆ; ಅಂಜೂರದ ಗಿಡವು ಕ್ಷೀಣವಾಗಿದೆ; ದಾಳಿಂಬ, ಖರ್ಜೂರ, ಸೇಬು, ಅಂತು ಸಕಲ ವನವೃಕ್ಷಗಳು ಒಣಗಿವೆ, ಆನಂದವು ತಗ್ಗಿ ನರಜನ್ಮದವರಿಗೆ ತಪ್ಪಿಹೋಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು