Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:18 - ಕನ್ನಡ ಸತ್ಯವೇದವು J.V. (BSI)

18 ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಝಿತ್ತೊ ಹಾಂವ್! ಮಿಯಾ ಮರಲ್ಲೊ, ಖರೆ ಅತ್ತಾ ಮಿಯಾ ಸದಾ ಸರ್ವತಾಕ್ ಝಿತ್ತೊ ಹಾಂವ್. ಮರ್ನಾಚೊ ಅನಿ ಪಾತಾಳಾಚೊ ಅಧಿಕಾರ್ ಮಾಜ್ಯಾ ಹಾತಿತ್ ಹಾಯ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:18
32 ತಿಳಿವುಗಳ ಹೋಲಿಕೆ  

ಯಾಕಂದರೆ ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ,


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ನಮ್ಮ ದೇವರು ನಮ್ಮನ್ನು ವಿಮೋಚಿಸುವದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಅವನು ದಾವೀದನ ಮನೆಯ ಬೀಗದ ಕೈಯನ್ನು ತನ್ನ ಹೆಗಲ ಮೇಲೆ ವಹಿಸಿಕೊಳ್ಳುವಂತೆ ಮಾಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಪರಲೋಕರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು; ಭೂಲೋಕದಲ್ಲಿ ನೀನು ಯಾವದನ್ನು ಕಟ್ಟುತ್ತೀಯೋ, ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀನು ಯಾವದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಅಂದನು.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕೂತಿರುವಾತನಿಗೆ ಆ ನಾಲ್ಕು ಜೀವಿಗಳು ಪ್ರಭಾವಮಾನ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವಾಗ್ಗೆ


ಆತನು ಬಲಹೀನಾವಸ್ಥೆಯಲ್ಲಿದ್ದದರಿಂದ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಬದುಕುತ್ತಾನೆ. ನಾವು ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ; ಆದರೂ ಆತನೊಂದಿಗೆ ದೇವರ ಬಲದಿಂದ ಬದುಕುವವರಾಗಿದ್ದೇವೆ; ಇದು ನಿಮಗೆ ತೋರಿಬರುವದು.


ನಾನಂತು ನನ್ನ ವಿಮೋಚಕನು ಜೀವಸ್ವರೂಪನೆಂದು ಬಲ್ಲೆನು; ಆತನು ಕಡೆಗೆ ದೂಳಿನ ಮೇಲೆ [ಸಾಕ್ಷಿಯಾಗಿ] ನಿಂತುಕೊಳ್ಳುವನು;


ಐದನೆಯ ದೇವದೂತನು ತುತೂರಿಯನ್ನೂದಿದಾಗ ಆಕಾಶದಿಂದ ಭೂವಿುಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದಕೈ ಕೊಡಲ್ಪಟ್ಟಿತು.


ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ.


ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.


ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟ.


ಆಗ ನಾಲ್ಕು ಜೀವಿಗಳು ಆಮೆನ್ ಅಂದವು; ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕಾರ ಮಾಡಿದರು.


ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.


ಮರಣದ ಬಾಗಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡಿಯಾ?


ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು.


ಆ ಸ್ತ್ರೀಯರು ಭಯ ಹಿಡಿದವರಾಗಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿರುವಾಗ ಆ ಪುರುಷರು ಅವರಿಗೆ - ಸತ್ತವರೊಳಗೆ ಬದುಕಿರುವವನನ್ನು ಹುಡುಕುವದೇನು? ಆತನು ಇಲ್ಲಿ ಇಲ್ಲ, ಎದ್ದಿದ್ದಾನೆ.


ಯೇಸು ಆಕೆಗೆ - ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನನ್ನು ನಂಬುವವನು ಸತ್ತರೂ ಬದುಕುವನು;


ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -


ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ಅವನ ಹಿಂದೆ ಪಾತಾಳವೆಂಬವನು ಬಂದನು. ಅವರಿಗೆ ಭೂವಿುಯ ಕಾಲುಭಾಗದಲ್ಲಿ ಕತ್ತಿಯಿಂದಲೂ ಬರದಿಂದಲೂ ಅಂಟುರೋಗದಿಂದಲೂ ಕಾಡುಮೃಗಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ ಭೂವಿುಯನ್ನೂ ಅದರಲ್ಲಿರುವ ಸಮಸ್ತವನ್ನೂ ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ


ನಾಲ್ಕು ಜೀವಿಗಳಲ್ಲಿ ಒಂದು ಈ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು