Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:9 - ಕನ್ನಡ ಸತ್ಯವೇದವು J.V. (BSI)

9 ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:9
35 ತಿಳಿವುಗಳ ಹೋಲಿಕೆ  

ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಯೋಹಾನನು ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ಸಾಕ್ಷಿಕೊಟ್ಟನು.


ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರರಾಗಿದ್ದದ್ದು ಒಳ್ಳೇದಾಯಿತು.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.


ಆದರೆ ಕಾಣದಿರುವದನ್ನು ನಾವು ಎದುರುನೋಡುವವರಾಗಿದ್ದರೆ ತಾಳ್ಮೆಯಿಂದ ಕಾದುಕೊಂಡಿರುವೆವು.


ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ.


ದೇವರ ಚಿತ್ತವನ್ನು ನೆರವೇರಿಸಿ ವಾಗ್ದಾನದ ಫಲವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಬೇಕು.


ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದನಂತರ ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.


ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟು


ಆತನು ಐದನೆಯ ಮುದ್ರೆಯನ್ನು ಒಡೆದಾಗ ದೇವರ ವಾಕ್ಯದ ನಿವಿುತ್ತವಾಗಿಯೂ ತಾವು ಹೇಳಿದ ಸಾಕ್ಷಿಯ ನಿವಿುತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ಕಂಡೆನು.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ


ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡಿಸಲಿ.


ಆಗ ಆತನು ಅವರಿಗೆ - ನನ್ನ ಪಾತ್ರೆಯಲ್ಲಿ ನೀವು ಕುಡಿಯುವಿರಿ ಸರಿ; ಆದರೆ ನನ್ನ ಎಡಬಲಗಡೆಗಳಲ್ಲಿ ಕೂತುಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.


ಆಗ ಯೇಸು ಅವರಿಗೆ - ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವಿರಿ; ನನಗಾಗುವ ಸ್ನಾನವು ನಿಮಗಾಗುವದು;


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರ ಆದರಣೆಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -


ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.


ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು