Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:3 - ಕನ್ನಡ ಸತ್ಯವೇದವು J.V. (BSI)

3 ಅದೇನಂದರೆ ಕೆಂಪಾದ ಮಹಾ ಘಟಸರ್ಪವಿತ್ತು; ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಮಕುಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಆ ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಆ ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಎಕ್ ವಳಕ್ ಮಳ್ಬಾ ವರ್ತಿ ದಿಸ್ಲಿ ಥೈ ಎಕ್ ತಾಂಬ್ಡೊ ಭಯಾನಕ್ ಸಾಂಪ್ ಹೊತ್ತೊ, ತೆಕಾ ಸಾತ್ ಟಕ್ಲಿ ಹೊತ್ತಿ ಅನಿ ಧಾ ಸಿಂಗಾ ಹೊತ್ತಿ. ತೆಚ್ಯಾ ಹರಿಎಕ್ ಟಕ್ಲ್ಯಾ ವರ್ತಿ ಎಕೆಕ್ ಮುಕುಟ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:3
27 ತಿಳಿವುಗಳ ಹೋಲಿಕೆ  

ನೀನು ಕಂಡ ಆ ಹತ್ತು ಕೊಂಬುಗಳು ಅಂದರೆ ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ಅರಸುಗಳು. ಅವರು ಒಂದು ಗಳಿಗೆಯವರೆಗೆ ರಾಜರಂತೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುತ್ತಾರೆ.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ಆಗ ಆ ದೇವದೂತನು ನನಗೆ ಹೇಳಿದ್ದು - ನೀನೇಕೆ ಆಶ್ಚರ್ಯಪಟ್ಟಿ? ಆ ಸ್ತ್ರೀಯಿಂದಲೂ ಅವಳ ವಾಹನವಾಗಿದ್ದು ಏಳು ತಲೆಗಳೂ ಹತ್ತು ಕೊಂಬುಗಳೂ ಉಳ್ಳ ಮೃಗದಿಂದಲೂ ಸೂಚಿತವಾದ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.


ಆ ಹತ್ತು ಕೊಂಬುಗಳ ವಿಷಯವೇನಂದರೆ ಆ ರಾಜ್ಯದಲ್ಲಿ ಹತ್ತುಮಂದಿ ಅರಸರು ಉಂಟಾಗುವರು; ಅವರ ತರುವಾಯ ಮತ್ತೊಬ್ಬನು ತಲೆದೋರುವನು; ಅವನು ಮುಂಚಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಅದುವಿುಬಿಡುವನು.


ನಾಲ್ಕನೆಯ ಮೃಗದ ವಿಷಯವಾಗಿಯೂ ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧನದಲ್ಲಿಟ್ಟನು.


ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರಲ್ಲೊಂದು ಭಾಗವನ್ನು ಎಳೆದು ಭೂವಿುಗೆ ಹಾಕಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅಲ್ಲೇ ಕಾದುಕೊಂಡಿತ್ತು.


ಪರಲೋಕದಲ್ಲಿ ಒಂದು ಮಹಾಲಕ್ಷಣವು ಕಾಣಿಸಿತು. ಅದೇನಂದರೆ, ಸೂರ್ಯನನ್ನು ಧರಿಸಿಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು;


ಮತ್ತು ಘಟಸರ್ಪ ಮೃಗ ಸುಳ್ಳುಪ್ರವಾದಿ ಇವರ ಬಾಯಿಗಳಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವದನ್ನು ಕಂಡೆನು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.


ಆತನ ಕಣ್ಣುಗಳು ಬೆಂಕಿಯ ಉರಿಯಂತಿವೆ; ಆತನ ತಲೆಯ ಮೇಲೆ ಅನೇಕ ಮಕುಟಗಳುಂಟು; ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟು


(ಘನಹೊಂದಿದ ಹಿರಿಯನೇ ತಲೆ; ಸುಳ್ಳುಬೋಧನೆ ಮಾಡುವ ಪ್ರವಾದಿಯೇ ಬಾಲ).


ಕಾಲ್ಬೆರಳುಗಳ ಒಂದಂಶವು ಕಬ್ಬಿಣ ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ ಒಂದಂಶವು ಬೆಂಡು.


ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡುವದಕ್ಕೆ ಹೊರಟರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು,


ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂವಿುಗೆ ಬಿದ್ದಿರುವದನ್ನು ಕಂಡು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವದಕ್ಕೆ ಅಟ್ಟಿಸಿಕೊಂಡು ಹೋದನು.


ಸಮುದ್ರದಿಂದ ಮೃಗವು ಏರಿಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಮಕುಟಗಳೂ ತಲೆಗಳ ಮೇಲೆ ದೇವದೂಷಣನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು;


ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ನಮಸ್ಕಾರ ಮಾಡುವವರಾದರು. ಇದಲ್ಲದೆ ಆ ಮೃಗಕ್ಕೂ ನಮಸ್ಕಾರ ಮಾಡಿ - ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧಮಾಡುವದಕ್ಕೆ ಯಾರು ಶಕ್ತರು? ಅಂದರು.


ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾಲಕ್ಷಣವು ನನಗೆ ಕಾಣಿಸಿತು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು; ಇವು ಕಡೇ ಉಪದ್ರವಗಳು; ಇವುಗಳಲ್ಲಿ ದೇವರ ರೌದ್ರವು ಮುಗಿದಿರುವದು.


ಹೆಜ್ಜೆಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ ಒಂದಂಶವು ಕಬ್ಬಿಣವೂ ಆಗಿದ್ದದ್ದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನಭಿನ್ನವಾಗಿರುವದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ವಿುಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು