Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:7 - ಕನ್ನಡ ಸತ್ಯವೇದವು J.V. (BSI)

7 ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡುವದಕ್ಕೆ ಹೊರಟರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸ್ವರ್ಗದಲ್ಲಿ ಒಂದು ಯುದ್ಧ ಪ್ರಾರಂಭವಾಯಿತು. ಮಿಕಾಯೇಲನು ತನ್ನ ಸಹದೂತರ ಸಹಿತ ಘಟಸರ್ಪದ ವಿರುದ್ಧ ಯುದ್ಧಮಾಡಿದನು. ಘಟಸರ್ಪವೂ ತನ್ನ ದೂತರ ಸಮೇತ ಯುದ್ಧದಲ್ಲಿ ಕಾದಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಂತರ ಪರಲೋಕದಲ್ಲಿ ಒಂದು ಯುದ್ಧವಾಯಿತು. ಮಿಕಾಯೇಲನು ಮತ್ತು ಅವನ ಸಹದೂತರು ಆ ಘಟಸರ್ಪದ ವಿರುದ್ಧ ಹೋರಾಡಿದರು. ಆ ಘಟಸರ್ಪ ಮತ್ತು ಅದರ ದೂತರೂ ಹೋರಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪರಲೋಕದಲ್ಲಿ ಯುದ್ಧನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡಿದರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಸರ್ಗಾರ್ ಎಕ್ ಮೊಟಿ ಮಾರಾಮಾರಿ ಉಟ್ತಾ. ಮಿಂಗೆಲ್ ಅನಿ ತೆಚಿ ದುತಾ ಭಯಾನಕ್ ಸಾಪಾಚ್ಯಾ ವಾಂಗ್ಡಾ ಮಾರಾಮಾರಿ ಕರ್‍ತ್ಯಾತ್, ತೊ ಸಾಪ್ ಅಪ್ನಾಚ್ಯಾ ದುತಾಕ್ನಿ ಘೆವ್ನ್ ವಾಯ್ಟ್ ಮಾರಾಮಾರಿ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:7
23 ತಿಳಿವುಗಳ ಹೋಲಿಕೆ  

ಆದರೆ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದಮಾಡಿದಾಗ ಅವನು ಸೈತಾನನ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಕ್ಕೆ ಧೈರ್ಯಗೊಳ್ಳದೆ - ಕರ್ತನು ನಿನ್ನನ್ನು ಖಂಡಿಸಲಿ ಅಂದನು.


ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ಮೀಕಾಯೇಲನು ಆ ಕಾಲದಲ್ಲಿ ಏಳುವನು; ಮೊಟ್ಟ ಮೊದಲು ಜನಾಂಗವು ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದಂಥ ಸಂಕಟವು ಸಂಭವಿಸುವದು; ಆಗ ನಿನ್ನ ಜನರೊಳಗೆ ಯಾರ ಹೆಸರುಗಳು [ಜೀವಬಾಧ್ಯರ] ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.


ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧನದಲ್ಲಿಟ್ಟನು.


(ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು.) ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನು ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ.


ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿವಸ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜನ ಸಂಗಡ [ಹೋರಾಡಿ]


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.


ಇದಲ್ಲದೆ ದೇವಜನರ ಮೇಲೆ ಯುದ್ಧಮಾಡಿ ಅವರನ್ನು ಜಯಿಸುವದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು. ಮತ್ತು ಸಕಲ ಕುಲ ಪ್ರಜೆ ಭಾಷೆ ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು; ಅವರು ಆತನ ರಾಜ್ಯದೊಳಗಿಂದ ಎಲ್ಲಾ ಕಂಟಕರನ್ನೂ


ಆತನು ಅವರ ಮೇಲೆ ತನ್ನ ಕೋಪ ರೌದ್ರಗಳನ್ನೂ ಉಗ್ರಹಿಂಸೆಗಳನ್ನೂ ಸಂಹಾರದೂತಗಣವನ್ನೋ ಎಂಬಂತೆ ಕಳುಹಿಸಿದನು.


ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ?


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಮತ್ತು ಆತನು ತುತೂರಿಯ ಮಹಾ ಶಬ್ದದಿಂದ ತನ್ನ ದೂತರನ್ನು ಕಳುಹಿಸುವನು. ಅವರು ಆತನು ಆದುಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವರು.


ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇವಿುಸಿದೆನು.


ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನಮಾಡಿ ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯತೀರಿಸುವದಕ್ಕೆ ದುಮುಕುವದು.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ ಆತನು ಬಹು ಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾಕರ್ತನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.


ಮತ್ತು ಪರಲೋಕದೊಳಗೆ ಅವರಿಗೆ ಸ್ಥಾನವು ತಪ್ಪಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು