Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:6 - ಕನ್ನಡ ಸತ್ಯವೇದವು J.V. (BSI)

6 ಅದು ಬಾಯಿತೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ ಆತನ ನಿವಾಸವನ್ನೂ ಪರಲೋಕ ನಿವಾಸಿಗಳನ್ನೂ ದೂಷಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದು ಬಾಯಿ ತೆರೆದು ದೇವರನ್ನು ದೂಷಿಸಿತು; ಅವರ ನಾಮವನ್ನು ಶಪಿಸಿತು. ಅವರ ಆಲಯವನ್ನು, ಅಂದರೆ ಸ್ವರ್ಗನಿವಾಸಿಗಳೆಲ್ಲರನ್ನೂ ತೆಗಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಮೃಗವು ದೇವರಿಗೆ ಅಪಮಾನ ಮಾಡಲು ತನ್ನ ಬಾಯನ್ನು ತೆರೆಯಿತು. ಅಲ್ಲದೆ ದೇವರ ಹೆಸರಿನ ವಿರುದ್ಧವಾಗಿಯೂ ದೇವರು ವಾಸಿಸುವ ಸ್ಥಳದ ವಿರುದ್ಧವಾಗಿಯೂ ಪರಲೋಕದಲ್ಲಿ ಜೀವಿಸುವ ಜನರೆಲ್ಲರ ವಿರುದ್ಧವಾಗಿಯೂ ದೂಷಣೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಮೃಗವು ತನ್ನ ಬಾಯಿತೆರೆದು, ದೇವರಿಗೆ ವಿರುದ್ಧವಾಗಿ ದೂಷಿಸಿ, ಅವರ ನಾಮವನ್ನೂ ಅವರ ನಿವಾಸವನ್ನೂ ಮತ್ತು ಪರಲೋಕ ನಿವಾಸಿಗಳನ್ನೂ ದೂಷಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆ ಭಯಾನಕ್ ಜನಾವರ್ ದೆವಾಕ್ ಎವ್ಡೆಚ್ ನ್ಹಯ್ ತ್ಯೆಚ್ಯಾ ನಾವಾಕ್, ತೊ ವಸ್ತಿ ಕರ್ತಲ್ಯಾ ಜಾಗ್ಯಾಕ್, ಅನಿ ಸರ್ಗಾತ್ ವಸ್ತಿ ಕರ್ತಲ್ಯಾಂಚ್ಯಾ ಸಗ್ಳ್ಯಾಂಚ್ಯಾ ವರ್ತಿ ಸರ್‍ಪುಕ್‍ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:6
26 ತಿಳಿವುಗಳ ಹೋಲಿಕೆ  

ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂವಿುಯೇ, ಸಮುದ್ರವೇ, ನಿಮ್ಮ ದುರ್ಗತಿಯನ್ನು ಏನು ಹೇಳಲಿ; ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾ ರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದುಬಂದಿದ್ದಾನೆ ಎಂಬದಾಗಿ ಹೇಳಿತು.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಹೇಗಂದರೆ ಮನಸ್ಸಿನೊಳಗಿಂದ ಕೆಟ್ಟ ಆಲೋಚನೆ ಕೊಲೆ ಹಾದರ ಸೂಳೆಗಾರಿಕೆ ಕಳ್ಳತನ ಸುಳ್ಳುಸಾಕ್ಷಿ ಬೈಗಳು ಹೊರಟು ಬರುತ್ತವೆ.


ಸರ್ಪಜಾತಿಯವರೇ, ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾ ಶಬ್ದವು ನನಗೆ ಕೇಳಿಸಿತು. ಅದು - ಇಗೋ, ದೇವರ ನಿವಾಸವು ಮನುಷ್ಯರಲ್ಲಿ ಅದೆ; ಆತನು ಅವರೊಡನೆ ವಾಸಮಾಡುವನು, ಅವರು ಆತನಿಗೆ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು,


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಆಮೇಲೆ ಅವರಿಗೆ - ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಆಕಾಶದ ಮಹಾವಾಣಿಯು ಹೇಳಿತು. ಅದನ್ನು ಅವರು ಕೇಳಿ ಮೇಘ ವಿಮಾನದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.


ಇವುಗಳಾದ ಮೇಲೆ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ನಿಂತಿರುವದನ್ನು ಕಂಡೆನು. ಅವರು ಸಕಲ ಜನಾಂಗಕುಲ ಪ್ರಜೆಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಇದಲ್ಲದೆ ಆಕಾಶದಲ್ಲಿಯೂ ಭೂವಿುಯ ಮೇಲೆಯೂ ಭೂವಿುಯ ಕೆಳಗೆಯೂ ಸಮುದ್ರದ ಮೇಲೆಯೂ ಇರುವ ಎಲ್ಲಾ ಸೃಷ್ಟಿಗಳು ಅಂದರೆ ಭೂಮ್ಯಾಕಾಶಸಮುದ್ರಗಳೊಳಗೆ ಇರುವದೆಲ್ಲವೂ - ಸಿಂಹಾಸನಾಸೀನನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ ಮಾನ ಪ್ರಭಾವ ಆಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ಕೇಳಿದೆನು.


ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ಇವುಗಳಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ಮತ್ತು ನನ್ನ ಸಂಗಡ ತುತೂರಿಯು ಮಾತಾಡುತ್ತದೋ ಎಂಬಂತೆ ನಾನು ಮೊದಲು ಕೇಳಿದ್ದ ವಾಣಿಯು ಕೇಳಿಸಿತು. ಇಲ್ಲಿಗೆ ಏರಿ ಬಾ, ಮುಂದೆ ಆಗಬೇಕಾದವುಗಳನ್ನು ನಿನಗೆ ತೋರಿಸುವೆನು ಎಂದು ಹೇಳಿತು. ಕೂಡಲೆ ದೇವರಾತ್ಮವಶನಾದೆನು.


ಅಂದರೆ ಒಂದು ಗುಡಾರವು ಕಟ್ಟಲ್ಪಟ್ಟಿತು; ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮರ್ಪಿಸಿದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರಸ್ಥಾನ ಎಂದು ಹೆಸರು.


ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ; ಅವರ ತುಟಿಗಳ ಹಿಂದೆ ಹಾವಿನ ವಿಷವದೆ.


ಕ್ರಿಸ್ತನಲ್ಲಿಯೇ ದೇವರ ಸರ್ವಸಂಪೂರ್ಣತೆಯು ಅವತರಿಸಿ ವಾಸಮಾಡುತ್ತದೆ,


ತಂದೆಯಾದ ದೇವರು ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮದಿವಸವನ್ನು ಶಪಿಸಿ ಇಂತೆಂದನು -


ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಲ್ಲಿ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು; ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.


ಪರಾತ್ಪರನಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನ ಭಕ್ತರನ್ನು ಸವೆಯಿಸಿ ಕಟ್ಟಳೆಯ ಕಾಲಗಳನ್ನೂ ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸುಮಾಡುವನು; ಆ ಭಕ್ತರು ಒಂದುಕಾಲ ಎರಡುಕಾಲ ಅರ್ಧಕಾಲ ಅವನ ಕೈವಶವಾಗಿರುವರು.


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆಮಾಡುತ್ತಾ ಇದ್ದಾರೆ; ಸಿಂಹಾಸನದಲ್ಲಿ ಕೂತಿರುವಾತನು ಗುಡಾರದಂತೆ ಅವರನ್ನು ಆವರಿಸುವನು.


ಇದಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನಗುಡಾರದ ಪವಿತ್ರಸ್ಥಾನವು ತೆರೆಯಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು