Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:13 - ಕನ್ನಡ ಸತ್ಯವೇದವು J.V. (BSI)

13 ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.” “ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನಾ ಸರ್‍ಗಾ ವೈನಾ ಎಕ್ ಅವಾಜ್,“ ಹೆ ಲಿವ್ ಹಿತ್ನಾ ಫಿಡೆ ಧನಿಯಾಚ್ಯಾ ಕಾಮಾತ್ ರಾವ್ನ್ ಮರಲ್ಲೆ ಕವ್ಡೆ ಸುಖಿ!” ಮನ್ತಲೆ ಮಿಯಾ ಆಯಿಕ್ಲೊ, ತನ್ನಾ ಪವಿತ್ರ್ ಆತ್ಮ್ಯಾನ್,“ಹೊಯ್ ಖರೆಚ್ ತೆ! ತೆನಿ ತೆಂಚ್ಯಾ ಮೊಟ್ಯಾ ರಾಬ್ನುಕಿತ್ನಾ ಆರಾಮ್ ಘೆವ್ನ್ ಖುಶಿ ಕರ್‍ತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತೆಂಚಿ ಬರಿ ಕಾಮಾ ತೆಂಚ್ಯಾ ಬರ್ಯಾ ಕಾಮಾಚೆ ಪ್ರತಿಫಳ್ ತೆಚ್ಯಾ ವಾಂಗ್ಡಾಚ್‍ ಜಾತಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:13
41 ತಿಳಿವುಗಳ ಹೋಲಿಕೆ  

ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.


ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.


ಪ್ರಧಾನದೂತನ ಶಬ್ದದೊಡನೆಯೂ ದೇವರ ತುತೂರಿಧ್ವನಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ಇದಲ್ಲದೆ ಅವನು ನನ್ನ ಸಂಗಡ ಮಾತಾಡುತ್ತಾ - ಯಜ್ಞದ ಕುರಿಯಾದಾತನ ವಿವಾಹದ ಔತಣಕ್ಕೆ ಕರಸಿಕೊಂಡವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿ - ಈ ಮಾತುಗಳು ದೇವರ ಸತ್ಯವಚನಗಳಾಗಿವೆ, ಅಂದನು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.


ಅವರಲ್ಲಿ ಒಬ್ಬೊಬ್ಬನಿಗೆ ಒಂದೊಂದು ಬಿಳಿ ನಿಲುವಂಗಿಯು ಕೊಡಲ್ಪಟ್ಟಿತು. ಇದಲ್ಲದೆ - ನಿಮ್ಮ ಹಾಗೆ ಕೊಲೆಯಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆದಾಸರ ಸಂಖ್ಯೆಯೂ ಪೂರ್ಣವಾಗುವ ತನಕ ಇನ್ನೂ ಸ್ವಲ್ಪ ಕಾಲ ವಿಶ್ರವಿುಸಿಕೊಂಡಿರಬೇಕೆಂದು ಅವರಿಗೆ ಉತ್ತರವಾಯಿತು.


ಇದನ್ನು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿರುವದೇ ಉತ್ತಮವೆಂದು ಎಣಿಸುತ್ತೇವೆ.


ಏಳನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದ ಮೇಲೆ ಹೊಯ್ಯಲು ದೇವಾಲಯದಲ್ಲಿರುವ ಸಿಂಹಾಸನದ ಕಡೆಯಿಂದ ಮಹಾ ಶಬ್ದವು ಉಂಟಾಗಿ - ಆಯಿತು ಎಂದು ಹೇಳಿತು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಅವುಗಳ ಮೂಲಕ ನಿನ್ನ ದಾಸನಿಗೆ ಎಚ್ಚರಿಕೆಯಾಗುತ್ತದೆ; ಅವುಗಳನ್ನು ಕೈಕೊಳ್ಳುವದರಿಂದ ಬಹಳ ಫಲ ಉಂಟಾಗುತ್ತದೆ.


ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿಮಾಡುವದು.


ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ಇದು ಮಾತ್ರವಲ್ಲದೆ ಕ್ರಿಸ್ತನವರಾಗಿ ನಿದ್ರೆಹೋದವರು ನಾಶವಾದರು.


ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ;


ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ - ಆ ಏಳು ಗುಡುಗುಗಳು ನುಡಿದದ್ದನ್ನು ನೀನು ಬರೆಯದೆ ಗುಪ್ತವಾಗಿಡು ಎಂದು ಹೇಳುವ ಆಕಾಶವಾಣಿಯನ್ನು ಕೇಳಿದೆನು.


ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.


ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ನೀನು ಹೋಗಿ ಅಂತ್ಯದವರೆಗೆ ಇರು; ನೀನು ದೀರ್ಘ ನಿದ್ರೆಯನ್ನು ಹೊಂದಿ ಯುಗಸಮಾಪ್ತಿಯಲ್ಲಿ ಎದ್ದು ನಿನಗಾಗುವ ಸ್ವಾಸ್ತ್ಯದೊಳಗೆ ನಿಲ್ಲುವಿ ಎಂದು ಹೇಳಿದನು.


ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದೇ ಇದ್ದಾನೆ; ನಿದ್ರೆಹೋದವರಲ್ಲಿ ಪ್ರಥಮಫಲವಾದನು.


ಕೆಲವರ ಪಾಪಕೃತ್ಯಗಳು ಪ್ರಸಿದ್ಧವಾಗಿದ್ದು ಅವರು ಇಂಥವರೆಂದು ಮೊದಲೇ ತಿಳಿಯಪಡಿಸುತ್ತವೆ; ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.


ಹಾಗೆಯೇ ಕೆಲವರ ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವರ ಸತ್ಕ್ರಿಯೆಗಳು ಅಪ್ರಸಿದ್ಧವಾಗಿದ್ದರೂ ಮರೆಯಾಗಿರಲಾರವು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು