Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:3 - ಕನ್ನಡ ಸತ್ಯವೇದವು J.V. (BSI)

3 ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ದೆವಾಚ್ಯಾ ಸೆವಕಾಚಿ ಮೊಯ್ಜೆಚಿ ಅನಿ ಬೊಕ್ಡಾಚಿ ಗಿತ್ ಗಾವುಲಾಗಲ್ಲ್ಯಾನಿ: “ಸರ್ವೆಸ್ವರಾ ಸಗ್ಳ್ಯಾನ್ ಮೊಟ್ಯಾ ದೆವಾ, ಕವ್ಡಿ ಮೊಟಿ ಅನಿ ವಿಚಿತ್ರ್ ತುಜಿ ಕಾಮಾ!, ಸಗ್ಳ್ಯಾ ದೆಶಾಂಚ್ಯಾ ರಾಜಾ, ಕವ್ಡ್ಯಾ ಸಮಾ ಅನಿ ಖರ್‍ಯಾ ತುಜ್ಯಾ ವಾಟಾ!,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:3
49 ತಿಳಿವುಗಳ ಹೋಲಿಕೆ  

ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.


ನೀನು ನನ್ನನ್ನು ಅದ್ಭುತವಾಗಿಯೂ ವಿಚಿತ್ರವಾಗಿಯೂ ರಚಿಸಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.


ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು; ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆತೋರಿಸುವವನು.


ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಆಗ ಮೋಶೆ ಇಸ್ರಾಯೇಲ್ಯರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು; ಏನಂದರೆ -


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳಿದ್ದರಿಂದ ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ.


ಮನುಷ್ಯರು ನಿನ್ನ ಭಯಂಕರಕೃತ್ಯಗಳಲ್ಲಿ ಕಂಡುಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.


ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,


ಐಗುಪ್ತ ದೇಶದ ಸೋನ್ ಸೀಮೆಯಲ್ಲಿ ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡಿಸಿದನು.


ಆತನು ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ;


ಆದರೂ ಲೇವಿಯರು ಅವಸರ ಪಡಲಿಲ್ಲ. ಆದದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರಿಸಿ ಅವನಿಗೆ - ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲಾ ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇವಿುನವರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?


ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗನುಸಾರವಾಗಿ ಆರೋನನೂ ಅವನ ಮಕ್ಕಳೂ ಇಸ್ರಾಯೇಲ್ಯರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮಮಾಡುತ್ತಾ ಧೂಪಹಾಕುತ್ತಾ ಮಹಾಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ ದೋಷಪರಿಹಾರ ಮಾಡುತ್ತಾ ಇದ್ದರು.


ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾ ನಗರಿಯು ಬಿದ್ದಳು. ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು ಎಂದು ಹೇಳಿದನು.


ಇಸ್ರಾಯೇಲ್ಯರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು; ಆದಕಾರಣ ನಿನ್ನ ಶಾಪದ ಕೇಡುಗಳೂ ದೇವಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವದ್ರೋಹಿಗಳೇ ಸರಿ.


ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ ಆಜ್ಞಾವಿಧಿಧರ್ಮಗಳನ್ನು ಕಲಿಸಿದಿ.


ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ದೇಹಬಿಟ್ಟನು.


ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡಿರಿ.


ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವಿಧಿಗಳನ್ನು ಜಾಗರೂಕತೆಯಿಂದ ಕೈಕೊಳ್ಳಿರಿ. ಹೀಗಿರಲಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನೇ ಹೊಂದಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಆತನನ್ನು ಸೇವಿಸಿರಿ ಎಂದು ಹೇಳಿ


ಮನುಷ್ಯರು ಕೀರ್ತಿಸಿರುವ ಆತನ ಕೆಲಸವನ್ನು ಹೊಗಳಲು ಮರೆಯಬೇಡ.


ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.


ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.


ಆತನ ಕೈಕೆಲಸಗಳು ನೀತಿಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.


ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು