Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:10 - ಕನ್ನಡ ಸತ್ಯವೇದವು J.V. (BSI)

10 ಐದನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಹೊಯ್ಯಲು ಅದರ ರಾಜ್ಯವು ಕತ್ತಲಾಯಿತು. ಜನರು ತಮಗಾದ ಕಷ್ಟದ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಸುರಿದನು. ಕೂಡಲೇ ಆ ಮೃಗ ರಾಜ್ಯದ ಮೇಲೆ ಅಂಧಕಾರ ಕವಿಯಿತು. ಜನರು ತಮಗೆ ಬಂದೆರಗಿದ ಬಾಧೆಯನ್ನು ತಾಳಲಾರದೆ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಆ ಮೃಗದ ಸಿಂಹಾಸನದ ಮೇಲೆ ಸುರಿದನು. ಮೃಗದ ರಾಜ್ಯದಲ್ಲಿ ಅಂಧಕಾರವು ಕವಿಯಿತು. ಜನರು ನೋವಿನಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಐದನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು, ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪಾಂಚ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ತ್ಯಾ ಭಯಾನಕ್ ಜನವಾರಾಂಚ್ಯಾ ಸಿವಾಸನಾಚ್ಯಾ ವರ್ತಿ ವೊತ್ಲ್ಯಾನ್. ತನ್ನಾ ಭಯಾನಕ್ ಜನವಾರಾಚ್ಯಾ ರಾಜಾತ್ ಕಾಳೊಕ್ ಭರ್‍ಲೊ, ಅನಿ ಲೊಕಾನಿ ಅಪ್ನಾಕ್ ಹೊತಲ್ಯಾ ತರಾಸಾನಿ ಅಪ್ನಾಚ್ಯಾ ಜಿಬ್ಲಿಯಾ ಚಾವುನ್ ಘೆಟ್ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:10
22 ತಿಳಿವುಗಳ ಹೋಲಿಕೆ  

ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು; ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕತ್ತಲಾದವು.


ಆದರೆ ಆ ರಾಜ್ಯದ ಬಾಧ್ಯಸ್ಥರು ಹೊರಗೆ ಕತ್ತಲೆಗೆ ಹಾಕಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು.


ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಕಾಣಿಸುವದಿಲ್ಲ. ವಧೂವರರ ಸ್ವರವು ಇನ್ನೆಂದಿಗೂ ಕೇಳಿಸುವದಿಲ್ಲ. ನಿನ್ನ ವರ್ತಕರು ಭೂವಿುಯ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದಿಂದ ಎಲ್ಲಾ ಜನಾಂಗದವರು ಮರುಳಾದರು.


ಯಾಕಂದರೆ ಅವರು ದೇವರ ಅಭಿಪ್ರಾಯವನ್ನು ನೆರವೇರಿಸುವದಕ್ಕೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವದಕ್ಕೂ ದೇವರು ತನ್ನ ವಚನವು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರಿಸಿದನು.


ಆಮೇಲೆ ಅರಸನು ಸೇವಕರಿಗೆ - ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರದೊಳಗೆ ಹಾಕಿ - ಮಹಾ ಪಟ್ಟಣವಾದ ಬಾಬೆಲು ಹೀಗೆಯೇ ದಡದಡನೆ ಕೆಡವಲ್ಪಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.


ಅಬ್ರಹಾಮ ಇಸಾಕ ಯಾಕೋಬ ಇವರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕುವದನ್ನೂ ನೀವು ನೋಡುವಾಗ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೆ ನೇವಿುಸುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಆತನು ಅವರ ಮೇಲೆ ತನ್ನ ಕೋಪ ರೌದ್ರಗಳನ್ನೂ ಉಗ್ರಹಿಂಸೆಗಳನ್ನೂ ಸಂಹಾರದೂತಗಣವನ್ನೋ ಎಂಬಂತೆ ಕಳುಹಿಸಿದನು.


ಇದು ಬುದ್ಧಿವಂತನಿಗೆ ಮಾತ್ರ ಗೊತ್ತಾಗುವದು. ಆ ಏಳು ತಲೆಗಳು ಆ ಸ್ತ್ರೀ ಕೂತುಕೊಂಡಿರುವ ಏಳು ಬೆಟ್ಟಗಳೇ;


ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಅಧರ್ಮಿಗಳನ್ನೂ ಕೂಡಿಸಿ ಬೆಂಕೀಕೊಂಡದಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಗೂಢಾರ್ಥವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಹೆಸರುಗಳುಂಟು; ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.


ನೀವು ದೇವರ ದಾಸರಾಗಿದ್ದೀರಲ್ಲಾ. ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಸನ್ಮಾನಿಸಿರಿ.


ನಾಲ್ಕನೆಯ ದೇವದೂತನು ತುತೂರಿಯನ್ನೂದಿದಾಗ ಸೂರ್ಯ ಚಂದ್ರ ನಕ್ಷತ್ರಗಳೊಳಗೆ ಮೂರರಲ್ಲಿ ಒಂದು ಭಾಗವು ಬಡಿಯಲ್ಪಟ್ಟು ಕತ್ತಲಾಯಿತು. ಆದದರಿಂದ ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು. ರಾತ್ರಿಯು ಹಾಗೆಯೇ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು