Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:7 - ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಯಜ್ಞವೇದಿಯು ಮಾತಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ ನಿಜ ಎಂದು ಹೇಳುವದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಜ್ಞವೇದಿಕೆಯಿಂದ ಹೀಗೆ ಹೇಳುವುದನ್ನೂ ನಾನು ಕೇಳಿಸಿಕೊಂಡೆನು: “ಹೌದು, ದೇವರಾದ ಪ್ರಭುವೇ, ಸರ್ವಶಕ್ತನೇ, ನಿನ್ನ ತೀರ್ಪುಗಳೆಲ್ಲಾ ಸತ್ಯವಾಗಿವೆ ಮತ್ತು ನ್ಯಾಯವಾಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಬಲಿಪೀಠವು ಹೀಗೆ ಮಾತನಾಡುವುದನ್ನು ಕೇಳಿದೆನು: “ಕರ್ತಾ, ಸರ್ವಶಕ್ತರಾದ ದೇವರೇ, ನಿಮ್ಮ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾನಾ ಆಲ್ತಾರಿಕ್ನಾ ಮಿಯಾ ಎಕ್ ಅವಾಜ್ ಆಯಿಕ್ಲೊ, ತೊ, “ಸರ್ವೆಸ್ವರಾ ಸಗ್ಳ್ಯಾನಿಕಿ ದೆವಾ! ತಿಯಾ ಕರಲ್ಲ್ಯಾ ನಿರ್ನಯಾತ್ನಿ ನ್ಯಾಯ್ ಅನಿ ಖರೆ ಹಾಯ್!” ಮನುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:7
11 ತಿಳಿವುಗಳ ಹೋಲಿಕೆ  

ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -


ಆತನು ಐದನೆಯ ಮುದ್ರೆಯನ್ನು ಒಡೆದಾಗ ದೇವರ ವಾಕ್ಯದ ನಿವಿುತ್ತವಾಗಿಯೂ ತಾವು ಹೇಳಿದ ಸಾಕ್ಷಿಯ ನಿವಿುತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ಕಂಡೆನು.


ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ತಂಡಸದಲ್ಲಿ ತೆಗೆದ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು


ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲಿನವನಿಗೆ - ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂವಿುಯ ದ್ರಾಕ್ಷೇಗೊಂಚಲುಗಳನ್ನು ಕೊಯ್ಯಿ; ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿದನು.


ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಆಗ ಒಂದು ಕೆರೂಬಿಯು ಕೆರೂಬಿಗಳ ನಡುವೆ ಕೈಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.


ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ - ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಕೆರೂಬಿಯ ಕೆಳಗೆ ಪ್ರವೇಶಿಸಿ ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿತಂದು ಪಟ್ಟಣದ ಮೇಲೆ ಎರಚು ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೆ ಹೋಗಿ ಅಲ್ಲಿ ಪ್ರವೇಶಿಸಿದನು.


ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು