Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:14 - ಕನ್ನಡ ಸತ್ಯವೇದವು J.V. (BSI)

14 ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಬೊಕ್ಡಾಚ್ಯಾ ವಿರೊದ್ ಕುಸ್ತಿ ಧರ್‍ತ್ಯಾತ್; ಖರೆ ಬೊಕ್ಡು ಅಪ್ನಾಚ್ಯಾ ಬಲ್ವಲ್ಲ್ಯಾ, ಎಚುನ್ ಕಾಡಲ್ಲ್ಯಾ ಅನಿ ವಿಶ್ವಾಸಾಚ್ಯಾ ವಾಂಗ್ಡಿಯಾಂಚ್ಯಾ ವಾಂಗ್ಡಾ ತೆಂಕಾ ಹಾರ್‍ವುನ್ ಸೊಡ್ತಾ, ಕಶ್ಯಾಕ್ ಮಟ್ಲ್ಯಾರ್ ತೊಚ್ ಧನಿಯಾಚೊ ಧನಿ ಅನಿ ರಾಜಾಂಚೊ ರಾಜಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:14
41 ತಿಳಿವುಗಳ ಹೋಲಿಕೆ  

ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು.


ಭಾಗ್ಯವಂತನಾದ ಏಕಾಧಿಪತಿಯು ತನ್ನ ಕ್ಲುಪ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು ರಾಜಾಧಿರಾಜನೂ ಕರ್ತರ ಕರ್ತನೂ


ಹೀಗೆ ಕರೆಯಲ್ಪಟ್ಟವರು ಬಹು ಜನ, ಆಯಲ್ಪಟ್ಟವರು ಸ್ವಲ್ಪ ಜನ ಅಂದನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು.


ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿ.


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಈ ಎಲ್ಲಾ ವಿಷಯಗಳಲ್ಲಿ ಪೂರ್ಣ ಜಯಶಾಲಿಗಳಾಗುತ್ತೇವೆ.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು.


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದನಂತರ ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಯುದ್ಧಕ್ಕೆ ಹೋಗುವ ಸೈನಿಕನು ಲೋಕ ವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸ ಪಡುತ್ತಿರುವನಲ್ಲವೇ.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.


ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ದೇವಭಕ್ತರೊಂದಿಗೆ ಯುದ್ಧಮಾಡಿ


ಇಗೋ, ನಾನು ಬಡಗಣ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇವಿುನ ಊರು ಬಾಗಲುಗಳ ಎದುರಿನಲ್ಲಿಯೂ ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.


ಯೇಸು ಕ್ರಿಸ್ತನವರಾಗುವದಕ್ಕೆ ಕರೆಯಲ್ಪಟ್ಟ ನೀವು ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ ಬರೆಯುತ್ತೇನೆ.


ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು