Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:13 - ಕನ್ನಡ ಸತ್ಯವೇದವು J.V. (BSI)

13 ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್‌ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದಾಲ್ಚಿನಿ, ಮಸಾಲೊ, ಧುಪ್, ರಗಾತ್‍ಬೊಳ್, ಬರಿ ವಾಸ್ ಯೆತಲಿ ತೆಲಾ, ಬರಿ ವಾಸ್ ಯೆತಲೊ ಸಾಂಬಾರ್, ಅನಿ, ವಾಯ್ನ್ ಅನಿ ಜೈತುನಾಚೆ ತೆಲ್, ದಳಲ್ಲೆ ಪಿಟ್ಟ್ ಅನಿ ಘವ್; ಗೊರಾ, ಬಕ್ರಿ, ಘೊಡ್ಕಿ ಅನಿ ರಥಾ ಮಾನ್ಸಾಕ್ ಸೈತ್ ಗುಲಾಮ್ ಕರುನ್ ತೆಂಚೆಕ್ನಾ ಇಕಾತ್ ಘೆಯ್ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:13
25 ತಿಳಿವುಗಳ ಹೋಲಿಕೆ  

ಯಾವಾನಿನವರೂ ತೂಬಲಿನವರೂ ಮೆಷೆಕಿನವರೂ ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನೂ ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಯಿಮಾಡಿದರು.


ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಇಸ್ರಾಯೇಲ್ಯರು ನ್ಯಾಯವಂತನನ್ನು ಬೆಳ್ಳಿಗೆ ಮಾರುತ್ತಾರೆ, ಒಂದು ಜೊತೆಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ವಿಕ್ರಯಿಸುತ್ತಾರೆ;


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ನಾವು ನವ್ಮಿುಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು ಅನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.


ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಯಾವನಾದರೂ ಸ್ವದೇಶದವನಾದ ಇಸ್ರಾಯೇಲ್ಯನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಮಾರಿಬಿಟ್ಟದ್ದಾಗಲಿ ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಮರಣಶಿಕ್ಷೆಯಾಗಬೇಕು.


ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ದೇಶದ ದರಿದ್ರರನ್ನು ನಿರ್ಮೂಲ ಮಾಡುವವರೇ, ಕೇಳಿರಿ!


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ, ಉತ್ತಮೋತ್ತಮ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫಿನ ಗಾಯಕ್ಕೆ ಮರುಗರು.


ನನ್ನ ನಲ್ಲನಿಗೆ ಕದತೆಗೆಯಬೇಕೆಂದು ಏಳಲು ಅಗುಳಿಯ ಹಿಡಿಗಳಲ್ಲಿ ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ಸುರಿಯಿತು.


ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ, ಇವುಗಳ ಚೂರ್ಣವನ್ನು ಉದರಿಸಿದ್ದೇನೆ.


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ ಅಪರಿವಿುತಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸಮಾನವಾದದ್ದು ಇಲ್ಲ.


ಅವರೆಲ್ಲರೂ ಅವನಿಗೆ ವರುಷ ವರುಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂದದ್ರವ್ಯ, ಕುದುರೆ, ಹೇಸರಕತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಪ್ರತಿವರುಷ ಆರುನೂರರುವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ ಅಪರಿವಿುತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವು ದೇಶಕ್ಕೆ ತಿರಿಗಿ ಬರಲೇ ಇಲ್ಲ.


ನೀವು ಐಗುಪ್ತದೇಶವನ್ನು ತಿರಿಗಿ ಎಂದಿಗೂ ನೋಡುವದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರಿಗಿ ಹೋಗಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವದಿಲ್ಲ.


ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವದರಿಂದ ತರುಣಿಯರು ನಿನ್ನನ್ನು ಪ್ರೀತಿಸುವರು.


ದೇವರಿಂದ ನಿಯವಿುತವಾದ ಈ ಯುದ್ಧದಲ್ಲಿ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ


ರಕ್ತಬೋಳ, ಧೂಪ, ವರ್ತಕರ ಸಕಲಸುಗಂಧ ದ್ರವ್ಯಗಳನ್ನು ಧೂಪಿಸಿದ ಧೂಮಸ್ತಂಭಗಳಂತೆ ಅರಣ್ಯದಿಂದ ಬರುವ ಈ ಮೆರವಣಿಗೆ ಯಾರದು?


ಬಾಬೆಲೇ, ನಿನ್ನ ಜೀವವು ಅಪೇಕ್ಷಿಸಿದ ಹಣ್ಣುಹಂಪಲುಗಳು ನಿನ್ನನ್ನು ಬಿಟ್ಟುಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವದೆಲ್ಲವೂ ನಾಶವಾಗಿ ನಿನ್ನನ್ನು ಬಿಟ್ಟುಬಿಟ್ಟವು. ಅವು ಇನ್ನು ಮೇಲೆ ಜನರಿಗೆ ಸಿಕ್ಕುವದೇ ಇಲ್ಲ.


ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ಅವಳ ಯಾತನೆಯನ್ನು ನೋಡಿ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ದುಃಖಿಸುತ್ತಾ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು